Friday, September 20, 2024
ರಾಜಕೀಯಸುದ್ದಿ

ಸಚಿವ ಎನ್ ಮಹೇಶ್ ರಾಜೀನಾಮೆ: ಮೈತ್ರಿಗೂ ಘಟನೆಗೂ ಸಂಬಂಧವಿಲ್ಲ: ಬಂಡೆಪ್ಪ ಕಾಶಂಪರ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಸಚಿವ ಎನ್ ಮಹೇಶ್ ರಾಜೀನಾಮೆ ಮೈತ್ರಿ ಸರ್ಕಾರಕ್ಕೆ ಇನ್ನೊಂದು ತಲೆನೋವಾಗಿದೆ. ಇದರ ಬೆನ್ನಲ್ಲೆ ಸಹಕಾರ ಸಚಿವ ಈ ಘಟನೆಯ ಕುರಿತು ಮಾತನಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಚಿವ ಬಂಡೆಪ್ಪ ಕಾಶಂಪರ್, ಮಹೇಶ್ ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಇಲ್ಲ. ಹೈಕಮಾಂಡ್ ಆದೇಶದ ಮೇಲೆ ಅವರು ರಾಜೀನಾಮೆ ನಿರ್ಧಾರ ತೆಗೆದುಕೊಂಡಿರಬಹುದು.

ಜಾಹೀರಾತು
ಜಾಹೀರಾತು
ಜಾಹೀರಾತು

ದೇವೇಗೌಡ ಹಾಗೂ ಮಾಯವತಿಯವರು ಚರ್ಚಿಸಿ ಸರಿಪಡಿಸುತ್ತಾರೆ. ಮೈತ್ರಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಜಾಹೀರಾತು