Friday, September 20, 2024
ರಾಜಕೀಯಸುದ್ದಿ

ಉಪ ಚುನಾವಣೆ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ: ದಿನೇಶ್‌ ಗುಂಡೂರಾವ್‌ – ಕಹಳೆ ನ್ಯೂಸ್

ಬೆಂಗಳೂರು : ಉಪ ಚುನಾವಣೆ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ರಾಮನಗರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದೂ ನಿರ್ಧಾರವಾಗಿದೆ. ಇದನ್ನು ಧಿಕ್ಕರಿಸಿ ಯಾರಾದರೂ ಬಂಡಾಯವೆದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.
ಈ ಚುನಾವಣೆಯನ್ನು ಜಂಟಿಯಾಗಿ ಎದುರಿಸಲಾಗುತ್ತಿದೆ. ಬಳ್ಳಾರಿ, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲೂ ಗೊಂದಲವಿಲ್ಲ. ಶಿವಮೊಗ್ಗದಿಂದ ಜೆಡಿಎಸ್‌ನ ಮಧು ಬಂಗಾರಪ್ಪ ಸ್ಪರ್ಧಿಸುತ್ತಾರೊ ಇಲ್ಲವೊ ಎನ್ನುವುದು ಗೊತ್ತಿಲ್ಲ. ಆದರೆ, ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಸಂಘಟನೆ ಶಕ್ತಿಯುತವಾಗಿದ್ದು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದರು.

ಮುಂದಿನ 2 ತಿಂಗಳಲ್ಲಿ ಸರಕಾರ ಪತನವಾಗಲಿದೆ ಎಂಬ ಬಿಜೆಪಿಯ ಅಶೋಕ್‌ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯವೇ ಇಲ್ಲ. ರಾಜಕಾರಣಿಗಳು ಜನಸೇವೆ ಬದಲು ರಾಜಕಾರಣಕ್ಕೆ ಸೀಮಿತರಾಗಿದ್ದಾರೆ ಎಂಬ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಹೇಳಿಕೆ ಅರ್ಥಹೀನ.

ಜಾಹೀರಾತು
ಜಾಹೀರಾತು
ಜಾಹೀರಾತು

5 ಬಾರಿ ಸಂಸದರಾಗಿ ಆಯ್ಕೆಯಾದರೂ ಮತೀಯ ರಾಜಕೀಯ ಮಾಡಿಕೊಂಡು ಬರುತ್ತಿರುವುದರಿಂದ ಅವರು ಹಾಗೆ ಹೇಳಿರಬಹುದು. ಈ ಬಗ್ಗೆ ಉತ್ತರ ಕನ್ನಡ ಜನರು ಯೋಚನೆ ಮಾಡಬೇಕು ಎಂದು ವ್ಯಂಗ್ಯವಾಡಿದರು.

ಜಾಹೀರಾತು