Friday, September 20, 2024
ರಾಜಕೀಯಸುದ್ದಿ

ರಫೇಲ್​ ಹಗರಣ: ಸಂವಾದ ನಡೆಸಲು ರಾಹುಲ್​ ಗಾಂಧಿ ಬೆಂಗಳೂರಿಗೆ – ಕಹಳೆ ನ್ಯೂಸ್

ಬೆಂಗಳೂರು:  ಹಿಂದೂಸ್ಥಾನ್​ ಏರೋನಾಟಿಕ್ಸ್​ ಲಿಮಿಟೆಡ್​ನ ಸಿಬ್ಬಂದಿ ಮತ್ತು ನಿವೃತ್ತ ನೌಕರರೊಂದಿಗೆ ರಫೇಲ್​ ಹಗರಣದ ವಿಷಯದ ಮೇಲೆ ಸಂವಾದ ನಡೆಸಲು ಶನಿವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ದೆಹಲಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್​ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​, ಸಚಿವ ಡಿ.ಕೆ ಶಿವಕುಮಾರ್​, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತಿತತರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ಕುಮಾರಕೃಪ ಅತಿಥಿ ಗೃಹದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಇಬ್ಬರು ನಾಯಕರ ನಡುವೆಯಷ್ಟೇ ನಡೆದ ಈ ಮಾತುಕತೆ ವೇಳೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳೂ ಚರ್ಚೆಗೆ ಬಂದಿದೆ ಎಂದು ಗೊತ್ತಾಗಿದೆ.

ಜಾಹೀರಾತು

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿಕ ರಾಹುಲ್​ ಗಾಂಧಿ ಅವರು ಎಚ್​ಎಎಲ್​ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.