Friday, September 20, 2024
ಸುದ್ದಿ

ಡಿ.ಕೆ.ಶಿ ಗೆ ಮತ್ತೊಂದು ಬಿಗ್ ಶಾಕ್: ಹೈಕಮಾಂಡ್ ಗೆ ದೂರು ನೀಡಿದ ನಾಯಕರು – ಕಹಳೆ ನ್ಯೂಸ್

ಬೆಂಗಳೂರು: ಲಿಂಗಾಯತ ಧರ್ಮ ವಿಚಾರದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿರುವ ಸಂಬಂಧ ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರು ಹೈಕಮಾಂಡ್ ಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ಹೋರಾಟಕ್ಕೆ ಬೆಂಬಲಿಸಿದ್ದಕ್ಕೆ ಡಿಕೆಶಿ ಕ್ಷಮೆಯಾಚಿಸಿದ್ದರು.ಇದಕ್ಕೆ ಕಾಂಗ್ರೆಸ್ ನ ಹಲವು ನಾಯಕರು ಆಕ್ಷೇಪಿಸಿದ್ದಾರೆ. ಜೊತೆಗೆ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಿಂಗಾಯತ ಧರ್ಮ ಹೋರಾಟಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೆಂಬಲಿಸಿತ್ತು. ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಸಂಪುಟ ಸಭೆಯಲ್ಲಿ ಶಿವಕುಮಾರ್ ಇದ್ದು, ಈ ನಡುವೆ ಡಿಕೆಶಿ ವೈಯಕ್ತಿಕ ಪ್ರತಿಷ್ಠೆಗಾಗಿ ಇಂಥ ಹೇಳಿಕೆ ನೀಡಿದ್ದಾರೆ. ಇದರಿಂದ ಪಕ್ಷಕ್ಕೆ ಮುಜುಗರವಾಗಿದೆ ಎಂದು ಹೈಕಮಾಂಡ್ ಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಜಾಹೀರಾತು