Friday, September 20, 2024
ಸುದ್ದಿ

70 ರಿಂದ 80 ಮಂದಿಯ ಸ್ಪರ್ಧೆಗೆ ಅವಕಾಶ ಮಾಡಿಕೊಡುವುದು ಬೇಡ: ಆರ್‌ಎಸ್‌ಎಸ್ ಬಿಜೆಪಿಗೆ ಸೂಚನೆ – ಕಹಳೆ ನ್ಯೂಸ್

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸದ್ಯ ಶಾಸಕರಾಗಿರುವ 70 ರಿಂದ 80 ಮಂದಿಯ ಸ್ಪರ್ಧೆಗೆ ಅವಕಾಶ ಮಾಡಿಕೊಡುವುದು ಬೇಡ ಅಂತ ಆರ್‌ಎಸ್‌ಎಸ್ ಬಿಜೆಪಿಗೆ ಸೂಚಿಸಿದೆ.

ಈ ಮಾಹಿತಿಯನ್ನು ಪಕ್ಷದ ನಾಯಕರೇ ಹೊರಗೆಡವಿದ್ದಾರೆ. ಹಲವು ಮಾಧ್ಯಮಗಳಲ್ಲಿ ಈಗಾಗಲೇ ವರದಿಯಾದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಎಲ್ಲಾ ಕ್ಷೇತ್ರಗಳ ಶಾಸಕರ ಸಾಧನೆಯ ಬಗ್ಗೆ ವರದಿಗಳನ್ನು ತರಿಸಿಕೊಂಡು ಪರಿಶೀಲನೆ ನಡೆಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್ ಸದ್ಯ ಬುದ್ನಿ ಕ್ಷೇತ್ರದ ಶಾಸಕರಾಗಿದ್ದು, ಅವರನ್ನು ಕೂಡ ಬಿಜೆಪಿ ಪರ ಒಲವಿರುವ ಗೋವಿಂದಪುರ ಕ್ಷೇತ್ರದಿಂದ ಸ್ಪರ್ಧಿಸಲು ಆರ್‌ಎಸ್‌ಎಸ್ ಸೂಚಿಸಿದೆ. ಸದ್ಯ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಗೌರ್ ಈ ಕ್ಷೇತ್ರದ ಶಾಸಕರಾಗಿದ್ದಾರೆ.

ಜಾಹೀರಾತು