Saturday, April 12, 2025
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ – ಕಹಳೆ ನ್ಯೂಸ್

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಇಂದು ಕಾಲೇಜಿನ ಆವರಣದಲ್ಲಿ ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ಧ್ವಜಾರೋಹಣಗೈದು ಮಾತನಾಡಿ ದೇಶ ಅಭಿವೃದ್ದಿ ಪಥದತ್ತ ಸಾಗುತ್ತಿರುವ ಸಂದರ್ಭ ಯುವಜನತೆ ಪಾತ್ರ ಮಹತ್ವದ್ದು. ರಾಷ್ಟೀಯ ಶಿಕ್ಷಣ ನೀತಿ ಮೂಲಕ ಕಲಿಕೆ ಮತ್ತು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯುತ್ತಿರುವುದರಿಂದ ಇನ್ನಷ್ಟು ಪ್ರಗತಿ ಸಾಧ್ಯ ಎಂದರು. ಈ ಸಂದರ್ಭ 75ನೇ ವರ್ಷದ ಗಣರಾಜ್ಯ ದಿನದ ಶುಭಾಶಯಗಳನ್ನು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶೈಕ್ಷಣಿಕ ಸಲಹೆಗಾರರು ಪ್ರೊ. ಬಾಲಚಂದ್ರ ಗೌಡ ಎಂ, ಪ್ರೊ. ಜವರೇ ಗೌಡ, ಪದವಿ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ಪದವಿ ಪೂರ್ವ ಪ್ರಾಂಶುಪಾಲೆ ಶ್ರೀಮತಿ ಮಿಥಾಲಿ ರೈ, ಚಂದ್ರಶೇಖರ್ ಪೇರಾಲು ಮತ್ತು ಇನ್ನಿತರರು ಉಪಸ್ಥಿತರಿದ್ದರು. ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಎಲ್ಲಾ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು, ಕಾಲೇಜು ಎನ್ ಸಿ ಸಿ, ಎನ್ ಎಸ್ ಎಸ್, ರೇಂಜರ್ ಮತ್ತು ರೋವರ್ಸ್, ರೆಡ್ ಕ್ರಾಸ್ ವಿಭಾಗಗಳ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ