Friday, September 20, 2024
ಸುದ್ದಿ

ವ್ಯಾಪಕ ಚರ್ಚೆಗೊಳಗಾದ ಸಚಿವ ಗಿರಿರಾಜ್ ಸಿಂಗ್ ಹೇಳಿಕೆ – ಕಹಳೆ ನ್ಯೂಸ್

ಬಾಗ್‌ಪಥ್‌: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆಯ ರಾಜ್ಯ ಸಚಿವ ಗಿರಿರಾಜ್ ಸಿಂಗ್ ಬಾಗ್‌ಪಥ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ.

ಜನಸಂಖ್ಯಾ ನಿಯಂತ್ರಣ ರ‍್ಯಾಲಿಯಲ್ಲಿ ಭಾಗವಹಿಸಿದ ಇವರು ಮುಸ್ಲಿಮರು ರಾಮನ ವಂಶಸ್ಥರು, ಮೊಘಲ್ ವಂಶಸ್ಥರಲ್ಲ. ಆದ್ದರಿಂದ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಬೆಂಬಲಿಸಬೇಕು, ಹಿಂದೂಗಳು ಅವರನ್ನು ದ್ವೇಷಿಸುತ್ತಾರೆ ಎನ್ನುವುದು ಅವರಿಗೆ ಚೆನ್ನಾಗಿ ಗೊತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಈ ದ್ವೇಷ ಹೆಚ್ಚಿದರೆ, ಪರಿಣಾಮ ಏನಾಗಬಹುದು ಎಂದು ಕಲ್ಪಿಸಿಕೊಳ್ಳಿ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು ಎಲ್ಲೆಡೆ ವ್ಯಾಪಕ ಚರ್ಚೆಯಾಗಿದೆ.