Friday, September 20, 2024
ಸುದ್ದಿ

ಪೊಲೀಸರ ಅನುಚಿತ ವರ್ತನೆ: ಪ್ರಶ್ನೆ ಮಾಡಿದ್ದಕ್ಕೆ ಎಸ್ ಐ ನಿಂದ ವ್ಯಕ್ತಿಗೆ ಹಲ್ಲೆ – ಕಹಳೆ ನ್ಯೂಸ್

ಎಸ್ ಐ ನಿಂದ ಹಲ್ಲೆ
ಚಿಕ್ಕಮಗಳೂರು: ಬಸ್ ನಿಲ್ದಾಣದಲ್ಲಿ ಪೊಲೀಸರಿಂದ ಅನುಚಿತ ವರ್ತನೆ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸ್ ಎಸ್ ಐ ಗರಂ ಆಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಚಿಕ್ಕಮಗಳೂರಿಂದ ಬೆಂಗಳೂರಿಗೆ ತೆರಳಲು ಚಿಕ್ಕಮಗಳೂರು ಬಸ್ ನಿಲ್ದಾಣಕ್ಕೆ ಬಂದಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿವಣ್ಣ ಎಂಬಾತ ಪೊಲೀಸರ ಅನುಚಿತ ವರ್ತನೆಯನ್ನು ಪ್ರಶ್ನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಎಸೈ ರಘು ಮತ್ತು ಪೇದೆಗಳು ರಾತ್ರಿ ಇಡೀ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯಿಂದ ಶಿವಣ್ಣನ ಎಡಗಣ್ಣು ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದ್ದು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತು ಎಸ್ಪಿಗೆ ದೂರನ್ನು ನೀಡಿದ್ದು ಪ್ರಕರಣ ದಾಖಲಾಗಿದೆ.