Friday, September 20, 2024
ಸುದ್ದಿ

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನ ಹರಾಜು ಹಾಕಿದ್ದಾರೆ: ಉಮೇಶ್ ವರ್ಮ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಸುತ್ತಿಗೆ ಪಡೆದಿರುವ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ನ ಶವದ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಸ್.ಉಮೇಶ್ ವರ್ಮ ಟೀಕಿಸಿದರು.

ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನವನ್ನೇ ಹರಾಜು ಹಾಕಿದ್ದಾರೆ. ಈಗ ಜೆಡಿಎಸ್ಗೆ ಶಿವಮೊಗ್ಗ ಕ್ಷೇತ್ರವನ್ನು ಬಿಟ್ಟುಕೊಡುವ ಮೂಲಕ ಜಿಲ್ಲಾ ಕಾಂಗ್ರೆಸ್ನ್ನು ಮೂರು ಭಾಗವಾಗಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಿರುವ ಸ್ಥಿತಿ ನೋಡಿದರೆ ಕಾಂಗ್ರೆಸ್ ಮತ್ತೆ ತನ್ನ ಶಕ್ತಿಯನ್ನು ಪಡೆದುಕೊಳ್ಳಲು ಹಲವು ದಶಕಗಳೇ ಬೇಕಾಗುತ್ತದೆ ಎಂದರು.

ಜಾಹೀರಾತು