Friday, September 20, 2024
ಸುದ್ದಿ

ಸಿಂಡಿಕೇಟ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಜಾಗೃತಿ ಅರಿವಿನ ಸಪ್ತಾಹ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಸಿಂಡಿಕೇಟ್ ಬ್ಯಾಂಕ್ ಪುತ್ತೂರು ಇದರ ಪ್ರಾಯೋಜಕತ್ವದಲ್ಲಿ “ಜಾಗೃತಿ ಅರಿವಿನ ಸಪ್ತಾಹ” ಕಾರ್ಯಕ್ರಮವನ್ನು ಅ.23ರಂದು ಹಮ್ಮಿಕೊಳ್ಳಲಾಯಿತು.

ಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಭ್ರಷ್ಟಾಚಾರ ಮುಕ್ತ ಭಾರತ’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ದೆಯನ್ನು ನಡೆಸಲಾಯಿತು ಹಾಗೂ ವಿದ್ಯಾರ್ಥಿಗಳಿಂದ ಭ್ರಷ್ಟಾಚಾರ ನಿರ್ಮೂಲನೆಯ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಕನ್ನಡ ಉಪನ್ಯಾಸಕಿ ಗೀತಾ ಕೊಂಕೋಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಇಂಗ್ಲೀಷ್ ಉಪನ್ಯಾಸಕಿ ವಿಸ್ಮಿತಾ ಮಧುಕರ್ ವಂದಿಸಿದರು.