Recent Posts

Saturday, September 21, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜೂನ್ 20ರಂದು ಬಿ.ಸಿ.ರೋಡ್ ನಲ್ಲಿ ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ-ಕಹಳೆ ನ್ಯೂಸ್

ಬಿಜೆಪಿ ಬಂಟ್ವಾಳ ಮಂಡಲದ ಪ್ರಮುಖರ ಸಭೆ ಬಿ.ಸಿ ರೋಡ್ ನ ಪಕ್ಷದ ಕಛೇರಿಯಲ್ಲಿ ಇಂದು ನಡೆಯಿತು.ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಮಾಡಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜೂನ್ 20ರಂದು ಬಿ.ಸಿ ರೋಡ್ ನಲ್ಲಿ ಬೃಹತ್ ಪ್ರತಿಭಟನೆಗೆ ತೀರ್ಮಾನಿಸಲಾಯಿತು.

ಬಳಿಕ ಸಭೆಯಲ್ಲಿ ಇಂದು ನಿಧನರಾದ ಲೋಕಸಭಾ ಕ್ಲಸ್ಟರ್ ಸಂಚಾಲಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಬಿಜೆಪಿ ನಾಯಕರಾದ ಶ್ರೀ ಭಾನುಪ್ರಕಾಶ್ ಅವರು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ದೇವಪ್ಪ ಪೂಜಾರಿ,ದೇವದಾಸ್ ಶೆಟ್ಟಿ,ರವೀಶ್ ಶೆಟ್ಟಿ,ಗೋವಿಂದ ಪ್ರಭು, ಡೊಂಬಯ ಅರಳ,ಸುಲೋಚನ ಜಿ.ಕೆ ಭಟ್,ರಾಮದಾಸ್ ಬಂಟ್ವಾಳ, ದಿನೇಶ್ ಅಮ್ಟೂರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು