Saturday, September 21, 2024
ಕುಂದಾಪುರಸುದ್ದಿ

ಕುಂದಾಪುರದ ಆರ್.ಎನ್.ಶೆಟ್ಟಿ. ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ-ಕಹಳೆ ನ್ಯೂಸ್

ಕುಂದಾಪುರ : ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕುಂದಾಪುರ ಶಾಸ್ತ್ರಿ ಸರ್ಕಲ್ ಸಮೀಪದ ಆರ್.ಎನ್.ಶೆಟ್ಟಿ. ಸಭಾಭವನದಲ್ಲಿ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು.

ಜನ ಸ್ಪಂದನ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಮುಂದಿನ ದಿನಗಳಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಹೆಚ್ಚಾಗಿ ತಿಳಿಯುವಂತೆ ಪ್ರಚಾರ ನೀಡಿ. ಹೆಚ್ಚಿನ ಜನರಿಗೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಮತ್ತು ಈ ದಿನ ನೀಡಿದ ಅರ್ಜಿಗಳನ್ನು ಮುಂದಿನ ಜನಸ್ಪಂದನ ಕಾರ್ಯಕ್ರಮದೊಳಗೆ ವಿಲೇವಾರಿ ಮಾಡಬೇಕಾಗಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾರ್ವಜನಿಕರು ಮುಂದಿನ ದಿನಗಳಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಾಸಕರು ವಿನಂತಿಸಿದರು.

ಜಾಹೀರಾತು

ಸದ್ರಿ ಈ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟೆಹೊಳೆ ಮಾನ್ಯ ಜಿಲ್ಲಾಧಿಕಾರಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಉಪಸ್ಥಿತಿಯಲ್ಲಿ ಕುಂದಾಪುರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನೆರವೇರಿತು. ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಂಡರು.