Friday, September 20, 2024
ಸುದ್ದಿ

ವಿಶ್ವದ ಅತ್ಯಂತ ಎತ್ತರದ ಸರ್ದಾರ್ ಪಟೇಲರ ‘ಏಕತಾ ಪ್ರತಿಮೆ’ ಅನಾವರಣ ಮಾಡಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಅಹಮದಬಾದ್,ಅ 31 : ಗುಜರಾತ್ ನ ಕೆವಾಡಿಯಾ ಗ್ರಾಮದ ಬಳಿಯ ನರ್ಮದಾ ನದಿ ತಟದಲ್ಲಿ ನಿರ್ಮಿಸಲಾಗಿರುವ 182 ಮೀಟರ್ ಎತ್ತರದ ಸರ್ದಾರ್ ಪಟೇಲರ ಏಕತಾ ಪ್ರತಿಮೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಟೇಲ್ ಅವರ 142 ನೇ ಜನ್ಮ ದಿನಾಚರಣೆಯ ದಿನವಾದ

ಜಾಹೀರಾತು
ಜಾಹೀರಾತು
ಜಾಹೀರಾತು

ಅ.31 ರಂದು ಲೋಕಾರ್ಪಣೆಗೊಳಿಸಿದರು.

ಜಾಹೀರಾತು

https://youtu.be/yMS0M70QQzA

ಈ ಪ್ರತಿಮೆ ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಪಡೆದಿದೆ.

ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಬಳಿಕ ವಾಯು ಸೇನೆಯ ಮೂರು ವಿಮಾನಗಳು ಹಾರಾಟ ನಡೆಸಿ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳನ್ನು ಹೊರಸೂಸಿತು. ಬಳಿಕ ಎಂಐ-17 ಹೆಲಿಕಾಪ್ಟರ್ ಗಳಿಂದ ಪ್ರತಿಮೆಗೆ ಪುಷ್ಪಗಳ ಸುರಿಮಳೆ ನಡೆಸಲಾಯಿತು.

ಆ ಬಳಿಕ ಮಾತನಾಡಿದ ಪ್ರಧಾನಿ ಮೋದಿ , ಸರ್ದಾರ್ ವಲ್ಲಭಭಾಯ್ ಪಟೇಲರ ಜನ್ಮದಿನವಾದ ಇಂದು ಭಾರತದ ಇತಿಹಾಸವನ್ನು ನಾವು ಮತ್ತೆ ನೆನಪಿಸಿಕೊಳ್ಳಬೇಕಾಗಿದೆ ರಾಜರ ಆಳ್ವಿಕೆಯಲ್ಲಿದ್ದ 550 ಪ್ರಾಂತ್ಯಗಳನ್ನು ಒಗ್ಗಟ್ಟಾಗಿಸಿ ಸಂಯುಕ್ತ ಭಾರತ ಕಟ್ಟಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಬುಧವಾರ ಏಕತಾ ದಿವಸವನ್ನು ಆಚರಣೆ ಮಾಡಲಾಗುತ್ತಿದೆ.

ಇತಿಹಾಸವನ್ನು ಗಮನಿಸಿದಾಗ ಅಂದು ಸರ್ದಾರ್ ಪಟೇಲ್ ಅವರು ದಿಟ್ಟತನ, ಏಕತೆಯ ಸಂಕಲ್ಪ ತೋರಿಸದಿದ್ದರೆ, ನಾವಿಂದ ಸೋಮನಾಥ ಹಾಗೂ ಹೈದರಾಬಾದ್ ನ ಚಾರ್ ಮಿನಾರ್ ನೋಡಲು ವೀಸಾ ಹೊಂದಿರಬೇಕಾದ ಪರಿಸ್ಥಿತಿ ಬರುತ್ತಿತ್ತು. ಆದರೆ ಪ್ರಾಂತ್ಯಗಳನ್ನು ಜತೆಗೂಡಿಸಿ ಸಂಯುಕ್ತ ಭಾರತ ಕಟ್ಟಿದ ಇಂಥ ಲೋಹಪುರುಷ ಪಟೇಲರಿಗೆ ನೂರೊಂದು ನಮನಗಳು ಎಂದರು.