Friday, September 20, 2024
ರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ: ಆಕ್ರೋಶ ವ್ಯಕ್ತಪಡಿಸಿದ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಉಡುಪಿ: ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗುರುವಾರ ಉಡುಪಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಮನಗರ ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದಾರೆ ಎಂಬ ಮಾಹಿತಿ ಇದೆ.

ಜಾಹೀರಾತು

ಇದು ಬಹಳ ಆತಂಕಕಾರಿ ವಿಚಾರ. ಕುಮಾರಸ್ವಾಮಿ ಮತ್ತು ಡಿಕೆಶಿಗೆ ಒಂದು ಪ್ರಶ್ನೆ ಕೇಳುತ್ತೇನೆ‌. ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ಎದುರಿಸುವ ಧೈರ್ಯ ಇಲ್ಲವೇ? ಅಭ್ಯರ್ಥಿಯನ್ನೇ ಸೆಳೆದಿರುವುದು ಪ್ರಜಾಪ್ರಭುತ್ವಕ್ಕೆ ಕಳಂಕ.

ಈ ಬೆಳವಣಿಗೆ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಆರೋಪಿಸಿದರು. ನಿಮ್ಮ ಸಮ್ಮಿಶ್ರ ಸರ್ಕಾರಕ್ಕೆ ಪಕ್ಷಕ್ಕೆ ಶೋಭೆ ತರಲ್ಲ. ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ