Friday, September 20, 2024
ಸುದ್ದಿ

ಶಿಷ್ಟಾಚಾರ ಉಲ್ಲಂಘನೆ ಮಾಡಿ ಅವಮಾನ: ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಶಾಸಕರು – ಕಹಳೆ ನ್ಯೂಸ್

ಬಂಟ್ವಾಳ: ಶಿಷ್ಟಾಚಾರ ಉಲ್ಲಂಘನೆ ಮಾಡಿ ಅವಮಾನ ಮಾಡಲಾಗಿದೆ ಎಂದು ತಹಶೀಲ್ದಾರ ಅವರನ್ನು ಶಾಸಕ ಸಹಿತ ಸೇರಿದ ಜನರು ತರಾಟೆಗೆ ತೆಗೆದುಕೊಂಡ ಘಟನೆ ಬಿಸಿರೋಡಿನ ಮಿನಿವಿಧಾನಸೌಧದ ಕಚೇರಿಯಲ್ಲಿ ನಡೆಯಿತು.

ಕನ್ನಡ ರಾಜ್ಯೋತ್ಸವ ಅಂಗವಾಗಿ ಬಿಸಿರೋಡಿನ ಮಿನಿವಿಧಾನಸೌಧದ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಸಂಧರ್ಭದಲ್ಲಿ ಶಾಸಕ ರಾಜೇಶ್ ನಾಯಕ್, ತಹಶೀಲ್ದಾರ ಪುರಂದರ ಹೆಗ್ಡೆ, ತಾ.ಪಂ.ಇಒ ರಾಜಣ್ಣ, ತಾ.ಪಂ.ಅಧ್ಯಕ್ಷ ಚಂದ್ರ ಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ ಜೊತೆಗೆ ಜನಪ್ರತಿನಿಧಿಯಲ್ಲದೆ ಮಾಜಿ ಶಾಸಕರ ಆಪ್ತ ವೆಂಕಪ್ಪ ಪೂಜಾರಿ ಅವರು ಧ್ವಜವಂದನೆ ಸ್ವೀಕರಿಸಿದ ಘಟನೆ ಸೇರಿದ ಜನಪ್ರತಿನಿಧಿಗಳ ಸಹಿತ ಅಧಿಕಾರಿಗಳನ್ನು ತಬ್ಬಿಬ್ಬು ಮಾಡಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಗೆ ತಹಶೀಲ್ದಾರರು ನೇರ ಕಾರಣ ಎಂದು ಸೇರಿದ್ದ ಕೆಲವರು ಆರೋಪ ವ್ಯಕ್ತಪಡಿಸಿದ ಸಂದರ್ಭದಲ್ಲಿ ತಹಶೀಲ್ದಾರ ಹಾಗೂ ಸೇರಿದ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಇಂತಹ ಘಟನೆ ಈ ಹಿಂದೆಯೂ ಇಲ್ಲಿ ನಡೆದಿದ್ದು ಅಧಿಕಾರಿಗಳ ತಪ್ಪು ಇದೆ ಎಂದು ಹೇಳಲಾಗುತ್ತದೆ.

ಜಾಹೀರಾತು