Friday, September 20, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೇಪು: ಸಿಡಿಲು ಬಡಿದು ಮನೆಗೆ ಹಾನಿ – ಕಹಳೆ ನ್ಯೂಸ್

ವಿಟ್ಲ : ಕೇಪು ಗ್ರಾಮದ ಚೆಲ್ಲಡ್ಕ ಎಂಬಲ್ಲಿನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾದ ಘಟನೆ ನಡೆದಿದೆ.

ಚೆಲ್ಲಡ್ಕ ಶಶಿಶೇಖರ ಭಂಡಾರಿ ಎಂಬವರ ಮನೆಗೆ ತಡರಾತ್ರಿ ಸಿಡಿಲು ಬಡಿದ ದುರ್ಘಟನೆ ಸಂಭವಿಸಿದೆ‌. ಘಟನೆಯಿಂದಾಗಿ ಮನೆಯೊಳಗಿದ್ದ ಫ್ರಿಡ್ಜ್, ಡ್ರೈಂಡ‌ರ್, ಎಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿಯಾಗಿದೆ‌. ಸಿಡಿಲಿನ ಆಘಾತಕ್ಕೆ ಎಲೆಕ್ಟ್ರೋನಿಕ್ಸ್ ಉಪಕರಣಗಳಲ್ಲಿ ಬೆಂಕಿ ಉಂಟಾದ ಹಿನ್ನೆಲೆಯಲ್ಲಿ ಮನೆಯ ಒಂದು ಭಾಗ ಬೆಂಕಿಗಾಹುತಿಯಾಗಿದೆ‌.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳೀಯ ಯುವಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದರಾದ ಬೆಂಕಿ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಲಾಗಿದ್ದು ಅವರು ಸ್ಥಳಕಾಗಮಿಸಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.

ಜಾಹೀರಾತು

ಘಟನೆ ನಡೆಯುವ ವೇಳೆ ಮನೆಯೊಳಗಿದ್ದ ಶಶಿಶೇಖರ ಭಂಡಾರಿ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕೇಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲದಾಸ್ ಭಕ್ತ, ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ, ಪಂಚಾಯತ್‌ ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ ಮೈರ, ಪುರುಷೋತ್ತಮ ಕಲ್ಲಂಗಳ, ಬಿಜೆಪಿ ಮುಖಂಡರಾದ ರಾಜೀವ ಭಂಡಾರಿ ಕುಂಡಕೋಳಿ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ವಿಎ ಕಚೇರಿ ಸಿಬ್ಬಂದಿ ಗಣೇಶ್ ಪ್ರಭು ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.