Friday, September 20, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ಘಟಕದ ಆಶ್ರಯದಲ್ಲಿ ಶ್ರವಣ್ ಅಗ್ರಬೈಲ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 3 ಕಾರ್ಯಕ್ರಮ- ಕಹಳೆ ನ್ಯೂಸ್

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ಘಟಕದ ಆಶ್ರಯದಲ್ಲಿ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಅಂಗವಾಗಿ ಪ್ರಚಾರ ನಿರ್ದೇಶಕ ಶ್ರವಣ್ ಅಗ್ರಬೈಲ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 3 ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿ ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷ ಕೀರ್ತಿಶೇಷ ಚಂದಪ್ಪ ಪೂಜಾರಿಯವರ ಸಮಾಜ ಸೇವೆ ಅವರ ಆದರ್ಶಗಳು ಯುವ ಸಮುದಾಯಕ್ಕೆ ಪ್ರೇರಣೆ ಎಂದು ಅಭಿಪ್ರಾಯಪಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ, ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ಶಿವಾನಂದ, ರಾಜೇಶ್ ಸುವರ್ಣ , ಅರುಣ್ ಕುಮಾರ್, ನಾಗೇಶ್ ಪೊಣ್ಣೋಡಿ ಹಿರಿಯ ಸದಸ್ಯ ನಾಗೇಶ್ ಎಮ್, ಹಾಗೂ ಪದಾಧಿಕಾರಿಗಳಾದ ಪ್ರಜಿತ್ ಅಮೀನ್, ಧನುಷ್ ಮಧ್ವ, ಮಧುಸೂಧನ್ ಮಧ್ವ, ಮಹೇಶ್ ಬೊಳ್ಳಾಯಿ, ಸದಸ್ಯರಾದ ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ, ಹಸ್ತ್ ರಾಯಿ, ಶಾಜಲ್ ರಾಯಿ, ಶ್ರವಣ್ ಬಿಸಿರೋಡ್, ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಚಿನ್ನ ಕಲ್ಲಡ್ಕ , ಆನಂದ್, ಸೂರಜ್ ಅಂಚನ್ ತುಂಬೆ ಮತ್ತಿತರರು ಭಾಗವಹಿಸಿದರು.*

ಜಾಹೀರಾತು