Friday, September 20, 2024
ಕುಂದಾಪುರಸುದ್ದಿ

ಕುಂದಾಪುರ:ಕಂಡ್ಲೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಛಾಯಾಗ್ರಾಹಕನ ಮೃತದೇಹ ಕುಂದಾಪುರ ಆನಗಳ್ಳಿ ನದಿ ತೀರದಲ್ಲಿ ಪತ್ತೆ -ಕಹಳೆ ನ್ಯೂಸ್

ಕುಂದಾಪುರ: ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ನಡೆದಿದೆ.

ನದಿಗೆ ಹಾರಿ ನಾಪತ್ತೆಯಾಗಿರುವವರನ್ನು ಕಾಳಾವರ ಜನತಾ ಕಾಲನಿ ನಿವಾಸಿ ಹರೀಶ್ (44) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಪೋಟೋಗ್ರಾಫರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹರೀಶ್ ಸುಮಾರು 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಇತ್ತಿಚಿನ ದಿನಗಳಲ್ಲಿ ಗಂಡ ಹೆಂಡತಿ ನಡುವೆ ಗಲಾಟೆಯಾಗುತ್ತಿತ್ತು ಎಂದು ಹೇಳಲಾಗಿದೆ. ಈ ಹಿನ್ನಲೆ ಜು.16ರಂದು ಹರೀಶ್ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಿದ್ದರು. ಪೊಲೀಸರು ಹರೀಶ್ ನನ್ನು ಕರೆದುಕೊಂಡು ಬರುವಂತೆ ಹೇಳಿದ್ದರು. ಅದರಂತೆ ಹರೀಶ್ ಠಾಣೆಗೆ ಬಂದಿದ್ದು ದಂಪತಿಗೆ ಪೊಲೀಸರು ಬುದ್ದಿ ಮಾತನ್ನು ಹೇಳಿ ಮುಂದಕ್ಕೆ ಒಳ್ಳೆಯ ರೀತಿಯಲ್ಲಿ ಜೀವನ ನಡೆಸುವಂತೆ ತಿಳುವಳಿಕೆ ಹೇಳಿ ಕಳುಹಿಸಿಕೊಟ್ಟಿದ್ದರು.

ಜಾಹೀರಾತು

ಹರೀಶ್ ತಾವು ಬಾಡಿಗೆ ಮಾಡಿಕೊಂಡು ಬಂದ ಆಟೋ ರಿಕ್ಷಾವು ಕಂಡ್ಲೂರು ಸೇತುವೆಯ ಮೇಲೆ ಸಂಚರಿಸುತ್ತಿರುವಾಗ ಹರೀಶ್ ರಿಕ್ಷಾ ಚಾಲಕನಲ್ಲಿ ನಿಲ್ಲಿಸುವಂತೆ ಹೇಳಿದ್ದಾರೆ. ಈ ವೇಳೆ ಆಟೋ ವೇಗ ಕಡಿಮೆ ಮಾಡಿದಾಗ ಹರೀಶ್ ಒಮ್ಮೇಲೆ ರಿಕ್ಷಾದಿಂದ ಕೆಳಕ್ಕೆ ಇಳಿದು ಸೇತುವೆಯ ತಡೆಬೇಲಿಯನ್ನು ಹಾರಿ ಕಂಡ್ಲೂರು ನದಿಗೆ ದುಮುಕಿದ್ದು ಹೊಳೆಯ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ.

ನಾಪತ್ತೆಯಾದ ಮಗ ಹರೀಶ್‌ನನ್ನು ಪತ್ತೆ ಹಚ್ಚಿಕೊಡಬೇಕೆಂದು ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಹರೀಶ್ ಅವರ ಹುಡುಕಾಟಕ್ಕೆ ಪೊಲೀಸರು, ಅಗ್ನಿಶಾಮಕ, ಸ್ಥಳೀಯರು, ಮೀನುಗಾರರು ವ್ಯಾಪಕ ಶೋಧ ನಡೆಸಿದ್ದು ಮಳೆ ಹಿನ್ನೆಲೆ ನೀರಿನ ಹರಿವು ಹೆಚ್ಚಿರುವ ಕಾರಣ ಸಾಧ್ಯವಾಗಿಲ್ಲ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಹರೀಶ್ ಕಾಳಾವರ ಅವರ ಮೃತದೇಹ ಇಂದು ಮಧ್ಯಾಹ್ನ 2.35ರ ವೇಳೆ ಕುಂದಾಪುರ ಆನಗಳ್ಳಿ ಸಮೀಪದ ನದಿ ತೀರದಲ್ಲಿ ಪತ್ತೆಯಾಗಿದೆ.
ನೀರಿನಲ್ಲಿ ಹಾರಿ ಕಾಣೆಯಾದ ಹರೀಶ್ ಅವರ ಹುಡುಕಾಟಕ್ಕೆ ಕಂಡ್ಲೂರು ಠಾಣಾ ಎಸ್‌ಐ ನೂತನ್‌ ಹಾಗೂ ಸಿಬಂದಿ ಹುಡುಕಾಟ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.

ಕುಂದಾಪುರದ ಅಗ್ನಿ ಶಾಮಕ ದಳದ ಸಿಬಂದಿಗಳು  ಸ್ಥಳೀಯ ಶೌರ್ಯ ತಂಡದ ಸದಸ್ಯರು, ಕಾಳಾವರದ ತಂಡ, ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡದಿಂದ ಎರಡು ದಿನಗಳಿಂದ ಮೃತದೇಹ ಹುಡುಕಾಟದ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.