Friday, September 20, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನದ ರಕ್ಷಣೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ ಇಂದು ನಡೆದಿದೆ.

ನೇತ್ರಾವತಿ ನದಿಯ ನೀರಿನ ಮಟ್ಟ ಇಂದು ಮತ್ತಷ್ಟು ಏರಿಕೆಯಾಗಿದ್ದು, 28.05 ಮೀ. ಎತ್ತರದಲ್ಲಿ ನೀರು ಹರಿಯುತ್ತಿತ್ತು. ರಭಸದಿಂದ ಹರಿಯುತ್ತಿದ್ದ ಈ ನದಿಯು ಮಧ್ಯದಲ್ಲಿ ದನವೊಂದು ತೇಲಿಕೊಂಡು ಹೋಗುತ್ತಿರುವುದನ್ನು ಗಮನಿಸಿದ ಹಳೆಗೇಟು ಸಮೀಪದ ದಡ್ಡು ಎಂಬಲ್ಲಿರುವ ಟಯರ್ ಅಂಗಡಿಯ ಮಾಲಕ ಚಂದಪ್ಪ ಅವರು ಕೂಡಲೇ ಪ್ರವಾಹ ರಕ್ಷಣಾ ತಂಡಕ್ಕೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೂಡಲೇ ಸ್ಥಳಕ್ಕಾಗಮಿಸಿದ ತಂಡ ತಮ್ಮಲ್ಲಿರುವ ರಬ್ಬರ್ ದೋಣಿಯ ಮೂಲಕ ತೆರಳಿ ದನದ ಮೂಗುದಾರಕ್ಕೆ ಹಗ್ಗವನ್ನು ಕಟ್ಟಿ ದಡಕ್ಕೆ ಕರೆತಂದು ಕಟ್ಟಿ ಹಾಕಿದರು.

ಜಾಹೀರಾತು

ಗೃಹ ರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್ ಬಿ. ಅವರ ನೇತೃತ್ವದ ಈ ರಕ್ಷಣಾ ಕಾರ್ಯಾಚರಣ ತಂಡದಲ್ಲಿ ಎ.ಎಸ್.ಎಲ್. ಜನಾರ್ದನ, ಚರಣ್, ಸುದರ್ಶನ್, ಹಾರೀಸ್, ಸಮದ್ ಭಾಗವಹಿಸಿದ್ದರು. ಇನ್ನು ನದಿ ಮಧ್ಯದಿಂದ ದನವನ್ನು ರಕ್ಷಿಸಿ ದಡಕ್ಕೆ ಕರೆ ತಂದ ಪ್ರವಾಹ ರಕ್ಷಣಾ ತಂಡದ ಸಾಹಸಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.