Saturday, September 21, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಿದ್ಯಾರ್ಥಿನಿ ದೃಶಾನ ಸುರೇಶ್ ಸರಳಿಕಾನ ಕರಾಟೆ ಚಾಂಪಿಯಷಿಪ್‍ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಿದ್ಯಾರ್ಥಿನಿ ದೃಶಾನ ಸುರೇಶ್ ಸರಳಿಕಾನ ಜಿಲ್ಲಾಮಟ್ಟದ ಕರಾಟೆ ಚಾಂಪಿಯಷಿಪ್‍ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಂಟನೇ ತರಗತಿ ವಿದ್ಯಾರ್ಥಿಯಾಗಿರುವ ದೃಶಾನ ಸುರೇಶ್ ಸರಳಿಕಾನ ಅವರು ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಆ. 8ರಂದು ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ 14 ವಯೋಮಿತಿ ಒಳಗಿನ (ಕಿಶೋರ ವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದರು. ಇವರು ಸುರೇಶ್ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ದಂಪತಿಯ ಪುತ್ರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು