Friday, September 20, 2024
ಕ್ರೈಮ್ಧಾರವಾಡರಾಜ್ಯಸುದ್ದಿ

ಒಂದೇ ಮರಕ್ಕೆ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ – ಕಹಳೆ ನ್ಯೂಸ್

ನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಸಚಿನ್ ದಳವಾಯಿ (22) ಮತ್ತು ಪ್ರಿಯಾ ಮಡಿವಾಳರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು

ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧರಿಸಿದ್ದರು. ಆದರೆ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು.

ಮದುವೆಗೆ ಮನೆಯಲ್ಲಿ ಒಪ್ಪಿಗೆ ದೊರೆಯಲಿಲ್ಲ ಎಂಬ ವಿಷಯವನ್ನು ಸಚಿನ್‌ ಪ್ರಿಯಾಳಿಗೆ ತಿಳಿಸಿದ್ದಾನೆ. ನಂತರ ನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.