Friday, September 20, 2024
ಸುದ್ದಿ

ಟಿಪ್ಪು ಜಯಂತಿ ಆಚರಣೆ ಈ ವರ್ಷವೂ ಮುಂದುವರೆಯಲಿದೆ: ಹೆಚ್.ಡಿ.ಕೆ – ಕಹಳೆ ನ್ಯೂಸ್

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಹಿಂದಿನ ಸರ್ಕಾರದಿಂದ ಆರಂಭವಾಗಿದ್ದು, ಈ ವರ್ಷವೂ ಮುಂದುವರೆಯಲಿದೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಪ್ರಕಟಿಸಿರುವ ಯೋಜನೆ ಹಾಗೂ ಕಾರ್ಯಕ್ರಮ ಮುಂದುವರೆಸಲು ಬದ್ದನಾಗಿರುವೆ. ಅದರಂತೆ ಟಿಪ್ಪು ಜಯಂತಿಯೂ ನಡೆಯಲಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಟಿಪ್ಪು ಜಯಂತಿ ಆಚರಣೆ ಕೈ ಬಿಡಬೇಕೆಂದು ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮುಖಂಡರು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದರೆ ಈಗ ಜಯಂತಿ ಆಚರಣೆ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.

ಜಾಹೀರಾತು