Saturday, September 14, 2024
ಉಡುಪಿಕಾಪುಸುದ್ದಿ

ಇನ್ನಂಜೆ ಯವಕ ಮಂಡಲ ವತಿಯಿಂದ ಮೊಸರು ಕುಡಿಕೆ ಕ್ರೀಡಾಕೂಟ-2024 ಮುದ್ದುಕೃಷ್ಣ ವೇಷ ಸ್ಪರ್ಧೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

 ಇನ್ನಂಜೆ ಯುವಕ ಮಂಡಲ (ರಿ) ಇನ್ನಂಜೆ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಇನ್ನಂಜೆ ಒಕ್ಕೂಟ, ಇನ್ನಂಜೆ ಗ್ರಾಮ ಪಂಚಾಯತ್, ಇನ್ನಂಜೆ ಯುವತಿ ಮಂಡಲ (ರಿ) ಇನ್ನಂಜೆ ರೋಟರಿ ಸಮುದಾಯ ದಳ ಇನ್ನಂಜೆ, ಬಿಲ್ಲವ ಸೇವಾ ಸಂಘ ಇನ್ನಂಜೆ, ನಿಸರ್ಗ ಫ್ರೆಂಡ್ಸ್ (ರಿ.) ಪಾದಕೆರೆ, ಇನ್ನಂಜೆ ಮಹಿಳಾ ಮಂಡಳಿ (ರಿ.), ಇನ್ನಂಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ಇಂದು ದಿನಾಂಕ 27-08-2024 ರಂದು ಆಯೋಜಿಸಲಾದ “ಮೊಸರು ಕುಡಿಕೆ ಕ್ರೀಡಾಕೂಟ-2024 ಮುದ್ದುಕೃಷ್ಣ ವೇಷ ಸ್ಪರ್ಧೆ”ಯ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಇನ್ನಂಜೆ ಯುವಕ ಮಂಡಲ ಅಧ್ಯಕ್ಷರಾದ ಮಧುಸೂದನ್ ಆಚಾರ್ಯ, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ, ಶ್ರೀ ಕ್ಷೇ.ಧ.ಗ್ರಾ ಯೋಜನೆ ಕಾಪು ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನವೀನ್ ಅಮೀನ್ ಹಾಗೂ ಇನ್ನಂಜೆ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು