Friday, September 20, 2024
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ‘ನಿರ್ಮಾಣ್’ ವಸ್ತು ಪ್ರದರ್ಶನ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ರ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ‘ನಿರ್ಮಾಣ್’ ಉತ್ಪಾದನಾ ಪ್ರಕ್ರಿಯೆ ಮಾದರಿ ಪ್ರದರ್ಶನವೂ ಸುವರ್ಣಮಹೋತ್ಸವ ಸಭಾಭವನದಲ್ಲ್ಲಿ ಯಶಸ್ವಿಯಾಗಿ ಮೂಡಿಬಂದಿತು.

ವಿವೇಕಾನAದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ, ಶ್ರೀ ದೇವಿಚರಣ್ ರೈ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ 51 ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳು 13 ತಂಡಗಳಲ್ಲಿ ಸ್ಥಳೀಯ ಉದ್ಯಮಗಳಾದ ಫ್ಲೇರ‍್ಸ್ ಐಸ್ಕ್ರೀಂ, ಕೋಕೋ ಗುರು, ಸ್ಪೆಷಾಲಿಟಿ ಗ್ರಾಫೈಟ್ಸ್, ಎಂ ಬಿ ಸಿ ಶಿವಾನಿ, ಸುರಕ್ಷಾ ಇಂಟರ್‌ಲಾಕಿAಗ್ ಮಡ್ ಬ್ಲಾಕ್, ಐಡಿಯಲ್ ಕ್ಯಾಶ್ಯೂ ಸೇರಿದಂತೆ ಇನ್ನೂ ಹಲವಾರು ಉದ್ಯಮಗಳಿಗೆ ಭೇಟಿ ನೀಡಿ ಅಲ್ಲಿನ ಉತ್ಪಾದನಾ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಿ ರಚಿಸಿದ ಮಾದರಿಗಳು ಪ್ರದರ್ಶನಗೊಂಡು ವೀಕ್ಷಕರ ಮೆಚ್ಚುಗೆಗೆ ಪಾತ್ರವಾದವು.

ಜಾಹೀರಾತು

ಈ ಕಾರ್ಯಕ್ರಮದಲ್ಲಿ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ಉದ್ಯಮಗಳ ಮಾದರಿಗಳನ್ನು ವೀಕ್ಷಣೆ ಮಾಡಿ ಅವುಗಳ ಉತ್ಪಾದನಾ ವಿಧಾನ – ಕಾರ್ಯನಿರ್ವಹಣೆಯ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಅಲ್ಲದೇ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಉಪನ್ಯಾಸಕರು ಹಾಗೂ ಆಸಕ್ತ ವಿದಾರ್ಥಿಗಳು ಭಾಗವಹಿಸಿದರು.