Friday, September 20, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲೀಗ ಪ್ರಪಂಚ ದರ್ಶನ! 195 ರಾಷ್ಟçಗಳ ರೇಖಾಚಿತ್ರ ಬಿಡಿಸಿ, ಗುರುತಿಸುವ ನಾಲ್ಕನೇ ತರಗತಿ ವಿದ್ಯಾರ್ಥಿ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಭಾರತದ ಭೂಪಟ ಬಿಡಿಸುವ ಪ್ರಶ್ನೆ ಬರುವುದು ಸಾಮಾನ್ಯ. ಅದಕ್ಕಾಗಿ ಕೆಲವು ವಿದ್ಯಾರ್ಥಿಗಳು ಮನೆಯಲ್ಲಿ ಭಾರತದ ಭೂಪಟವನ್ನು ಪುಸ್ತಕದ ಹಾಳೆಗಳಲ್ಲಿ ಚಿತ್ರಿಸುತ್ತಾ, ರಬ್ಬರಿಂದ ಒರೆಸುತ್ತಾ, ಪುನಃ ಪುನಃ ಪ್ರಯತ್ನಗೈಯುತ್ತಾ ಅಭ್ಯಾಸ ಮಾಡುವುದಿದೆ. ಹೀಗಿರುವಾಗ ಭಾರತದೊಂದಿಗೆ ಸುತ್ತಮುತ್ತಲಿನ ರಾಷ್ಟçಗಳಾದ ಚೀನಾ, ಪಾಕಿಸ್ಥಾನ, ಬಾಂಗ್ಲಾಗಳನ್ನೂ ಚಿತ್ರಿಸಬೇಕೆಂದರೆ ಅನೇಕರು ಶಾಲೆಗೇ ಗುಡ್ ಬೈ ಹೇಳುವ ಅಪಾಯವಿದೆ!

ಆದರೆ ಇಲ್ಲೊಬ್ಬ ವಿದ್ಯಾರ್ಥಿ ಇದ್ದಾನೆ. ಈತ ಭಾರತದೊಂದಿಗೆ ಸ್ಥಳೀಯ ರಾಷ್ಟçಗಳನ್ನೂ ಚಿತ್ರಿಸುತ್ತಾನೆ. ನೀವಿನ್ನೂ ನೋಡುತ್ತಲೇ ಇದ್ದರೆ ಮತ್ತೂ ಚಿತ್ರಿಸುತ್ತಾ ಸಾಗುತ್ತಾನೆ. ಅಂತಿಮವಾಗಿ ಇಡಿಯ ಪ್ರಪಂಚವನ್ನೇ ನಿಮ್ಮ ಕಣ್ಣ ಮುಂದೆ ಅರಳಿಸಿಬಿಡುತ್ತಾನೆ! ಹೌದು ಪ್ರಪಂಚದ ನೂರ ತೊಂಬತ್ತೆöÊದು ದೇಶಗಳನ್ನೂ ಈ ವಿದ್ಯಾರ್ಥಿ ಆಯಾ ಜಾಗದಲ್ಲೇ ಚಿತ್ರಿಸಿ ತೋರಿಸುತ್ತಾನೆ! ಜತೆಗೆ ಭಾರತದ ಭೂಪಟದೊಂದಿಗೆ ಆಯಾ ರಾಜ್ಯಗಳನ್ನೂ ಗುರುತಿಸಿ ಚಿತ್ರಿಸುತ್ತಾನೆ. ಒಮ್ಮೆ ಚಿತ್ರಿಸಲು ಆರಂಭಿಸಿದರೆ ತಿದ್ದದೇ ಕೊನೆಯವರೆಗೂ ಮುಂದುವರೆಯುತ್ತಾನೆAಬುದು ಸೋಜಿಗ ತರುವ ವಿಚಾರ. ಪುತ್ತೂರಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ನಾಲ್ಕನೆಯ ತರಗತಿಯ ಪರೀಕ್ಷಿತ್ ಎಂಬ ವಿದ್ಯಾರ್ಥಿಯ ಕೈಚಳಕ, ಜಾಣ್ಮೆ, ಜ್ಞಾನ ಹಾಗೂ ನೆನಪಿನಶಕ್ತಿ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಈ ನಡುವೆ ತಾನು ಚಿತ್ರಿಸಿದ ನೂರತೊಂಬತ್ತೆöÊದು ರಾಷ್ಟçಗಳನ್ನೂ ಹೆಸರು ಸಹಿತ ಗುರುತಿಸುತ್ತಾನೆಂಬುದು ಅಚ್ಚರಿಯೇ ಸರಿ!

ಜಾಹೀರಾತು
ಜಾಹೀರಾತು
ಜಾಹೀರಾತು

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯದ ವೃದ್ಧಿಗಾಗಿ ಒಂದೊAದಕ್ಕೆ ಸರಿಸುಮಾರು ಒಂದೂಮುಕ್ಕಾಲು ಲಕ್ಷಬೆಲೆಬಾಳುವ ಹಲವು ಸ್ಮಾರ್ಟ್ಬೋರ್ಡ್ಗಳನ್ನು ಅಳವಡಿಸಲಾಗಿದೆ. ಈಬೋರ್ಡ್ ವಿದ್ಯಾರ್ಥಿಗಳ ಆಸಕ್ತಿಯ ಕೇಂದ್ರಬಿAದುವೆನಿಸಿದೆ. ಅನೇಕಹೊಸ ಹೊಸ ಪ್ರಯೋಗಗಳಿಗೆ ಈ ಬೋರ್ಡ್ ತನ್ನನ್ನು ತಾನುಒಡ್ಡಿಕೊಳ್ಳುತ್ತಿದೆ. ಹಲವು ಬಗೆಯ ಸಾಧ್ಯತೆಗಳನ್ನು ಈಬೋರ್ಡ್ ಸಾಕಾರಗೊಳಿಸುತ್ತಿರುತ್ತದೆ. ಹಾಗಾಗಿ ಅನೇಕ ವಿದ್ಯಾರ್ಥಿಗಳೂ ಈ ಬೋರ್ಡ್ ಮುಖಾಂತರ ಹೊಸ ಹೊಸ ಆಲೋಚನೆಗಳನ್ನು ಮೊಗೆಯುತ್ತಿದ್ದಾರೆ. ಇದೀಗ ಪರೀಕ್ಷಿತನಿಗೆ ಈ ಬೋರ್ಡ್ ಮೂಲಕ ಪ್ರಪಂಚವನ್ನೇಕೆ ಚಿತ್ರಿಸಬಾರದು ಎಂಬ ಪ್ರಶ್ನೆ ಬಂದಿದೆ. ಹಾಗಾಗಿ ಪ್ರಯತ್ನಪಡುತ್ತಾ ಸಾಗಿ ಇದೀಗ ಆ ಬೋರ್ಡ್ನಲ್ಲಿ ಜಗತ್ತನ್ನೇ ಕೆತ್ತುತ್ತಿದ್ದಾನೆ!

ಜಾಹೀರಾತು

ಹುಟ್ಟುಹಬ್ಬಕ್ಕೆ ಅಪ್ಪ ನೀಡಿದ ಅಟ್ಲಾಸ್ ನೋಡಿಕೊಂಡು ಪ್ರಪಂಚದ ಚಿತ್ರ ಬಿಡಿಸಲಾರಂಭಿಸಿದೆ. ಶಾಲೆಯಲ್ಲಿ ಆಡಳಿತ ಮಂಡಳಿ, ಶಿಕ್ಷಕರು ನೀಡುವ ಪ್ರೋತ್ಸಾಹ ನನ್ನನ್ನು ಪ್ರೇರೇಪಿಸುತ್ತಿರುತ್ತದೆ. ಹೆತ್ತವರ ಮಾರ್ಗದರ್ಶನವೂ ಸಾಕಷ್ಟಿದೆ. ಶಾಲೆಯ ಸ್ಮಾರ್ಟ್ ಬೋರ್ಡ್ ನನ್ನ ಕಾರ್ಯಕ್ಕೆ ತುಂಬಾ ಸಹಕಾರಿಯಾಗಿದೆ. ಪ್ರತಿಬಾರಿಯೂ ವಿಶ್ವ ಭೂಪಟ ಬಿಡಿಸುವಾಗ ಭಾರತದಿಂದಲೇ ಶುರುಮಾಡುತ್ತೇನೆ ಎನ್ನುತ್ತಾನೆ ಪರೀಕ್ಷಿತ್. ಪುತ್ತೂರಿನ ಸುಧಾಕರ ಪಿ ಹಾಗೂ ವಾಣಿ ಕೆ ದಂಪತಿಗಳು ಪರೀಕ್ಷಿತನ ಹೆತ್ತವರು. ತಂದೆ ಸಮಾಜಶಾಸ್ತç ಶಿಕ್ಷಕರಾಗಿರುವುದು ಪರೀಕ್ಷಿತನ ಪ್ರತಿಭೆಗೆ ಹೆಚ್ಚಿನ ಇಂಬು ನೀಡಿದೆ.

ಮಕ್ಕಳಲ್ಲಿ ಅಪಾರ ಪ್ರಮಾಣದ ಪ್ರತಿಭೆ, ಸಾಮರ್ಥ್ಯ ಅಡಗಿದೆ. ಅದನ್ನು ಹೊರತರುವ ಕಾರ್ಯ ಹೆತ್ತವರಿಂದ ಹಾಗೂ ಶಿಕ್ಷಣ ಸಂಸ್ಥೆಗಳಿAದ ಆಗಬೇಕಿದೆ. ನಮ್ಮ ಸಂಸ್ಥೆಯಲ್ಲಿ ಸ್ಮಾರ್ಟ್ ಬೋರ್ಡ್ ಅಳವಡಿಸಿರುವುದು ಮಕ್ಕಳ ಸೃಜನಶೀಲತೆ ವೃದ್ಧಿಗೆ ಸಹಕಾರಿಯಾಗಿದೆ. ಕಲಿಕಾ ಸಾಮರ್ಥ್ಯದಲ್ಲಿ ಹೆಚ್ಚಳ ಕಾಣುತ್ತಿದೆ. ನಾವು ಒದಗಿಸಿಕೊಟ್ಟ ವ್ಯವಸ್ಥೆಯನ್ನು ಮಕ್ಕಳು ಬಳಸಿಕೊಂಡು ಸಾಧನೆ ಮೆರೆಯುವಾಗ ಸಾರ್ಥಕಭಾವ ಮೂಡುತ್ತದೆ.