Sunday, September 22, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜು ಬಾಲಕರ ತಂಡ ಪರಥಮ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ನರೇಂದ್ರ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪರಥಮ ಪಿಯುಸಿಯ ಜಿತೇಶ್. ಸಿ, ಹೇಮಂತ್. ಆರ್. ಗೌಡ, ಅಕ್ಷಯ್. ಬಿ, ಸಿಂಚನ್.ಕೆ.ಎ., ಸಾತ್ವಿಕ್.ಶೆಟ್ಟಿ ಹಾಗೂ ದ್ವಿತೀಯ ಪಿಯುಸಿಯ ಧ್ಯಾನೇಶ್, ಸಂದೇಶ್, ಹಿತೇಶ್.ಪಿ, ಸುಶಾಂತ್ ಅಂಚನ್, ವಹಿನ್ ಭಾಗವಹಿಸಿದರು. ಈ ಪಂದ್ಯಾಟದಲ್ಲಿ ಪ್ರಥಮ ಪಿಯುಸಿಯ ಹೇಮಂತ್.ಆರ್. ಗೌಡ ಉತ್ತಮ ಪಾಸ್ಸರ್ ಪ್ರಶಸ್ತಿ ಹಾಗೂ ದ್ವಿತೀಯ ಪಿಯುಸಿಯ ಹಿತೇಶ್ ಸರ್ವಾಂಗೀಣ ಆಟಗಾರರು ಪ್ರಶಸ್ತಿಯನ್ನು ಪಡೆದರು. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ.

ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಉಪನ್ಯಾಸಕ ಹಾಗೂ ಉಪನ್ಯಾಸಕ್ಕೇತರ ವೃಂದದವರು ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು