Thursday, October 3, 2024
ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಬಿಜೆಪಿ ಸದಸ್ಯತ್ವ ಅಭಿಯಾನ : ಅ.4ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿರುವ ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನದ ಅಂಗವಾಗಿ ಅ.4ರಂದು ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಯುವಮೋರ್ಚಾದ ಪದಾಧಿಕಾರಿಗಳನ್ನು ಭೇಟಿ ಮಾಡಿ ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿ ಪಡೆಯಲಿದ್ದು, ಈ ಸಂಧರ್ಭದಲ್ಲಿ ಯುವ ಮೋರ್ಚಾಜ ರಾಜ್ಯ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸಂದೀಪ್ ರವಿ ಅವರು ಕೂಡ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಇದೇ ವೇಳೆ ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಅವರು ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಬಳಿಕ ಬಿಜೆಪಿ ಕಛೇರಿಗೆ ಭೇಟಿ ನೀಡಲಿದ್ದಾರೆ.