Monday, September 16, 2024
ಸುದ್ದಿ

ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಟಿಪ್ಪು ಜಯಂತಿಯನ್ನು ಆಚರಿಸೋಣ ಎಂದ ದಕ್ಷಿಣ ಕನ್ನಡದ ಡಿ.ಸಿ. ಎಸ್. ಸಸಿಕಾಂತ್ ಸೆಂಥಿಲ್ – ಕಹಳೆ ನ್ಯೂಸ್

ಮಂಗಳೂರು ನ06 : ದ.ಕ. ಜಿಲ್ಲಾಡಳಿತ ಮತ್ತು ಕನ್ನಡ -ಸಂಸ್ಕೃತಿ ಇಲಾಖೆಯ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಜಿಲ್ಲಾ ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ಸಂಭ್ರಮ ಸೇರಿದಂತೆ ಅರ್ಥಪೂರ್ಣವಾಗಿ ಆಚರಿಸಲು ಸರ್ವ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜರುಗಿದ ಟಿಪ್ಪು ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದ.ಕ. ಜಿಲ್ಲಾಡಳಿತ ಮತ್ತು ಕನ್ನಡ -ಸಂಸ್ಕೃತಿ ಇಲಾಖೆಯ ವತಿಯಿಂದ ನ.10ರಂದು ಪೂರ್ವಾಹ್ನ 10:30ಕ್ಕೆ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಟಿಪ್ಪು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಎಂದವರು ಹೇಳಿದರು.

ಜಾಹೀರಾತು

ಇನ್ನೂ ಟಿಪ್ಪು ಜಯಂತಿ ಪ್ರಯುಕ್ತ ಉಪನ್ಯಾಸಕರ ಆಯ್ಕೆ, ವೇದಿಕೆ ಅಲಂಕಾರಕ್ಕೆ ಸೂಚನೆಯನ್ನು ನೀಡಲಾಗಿದ್ದು, ಟಿಪ್ಪು ಜಯಂತಿ ಆಚರಣೆಯಲ್ಲಿ ಉಪನ್ಯಾಸಗಳು ಕೇಳುಗರಲ್ಲಿ ಜ್ಞಾನ ವೃದ್ಧಿಸುವಂತಹದಾಗಿರಬೇಕು ಎಂದು ತಿಳಿಸಿದ್ದಾರೆ.