Friday, September 20, 2024
ಸುದ್ದಿ

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ನನ್ನನ್ನು ಆಹ್ವಾನಿಸಬೇಡಿ: ಹರೀಶ್ ಪೂಂಜಾ – ಕಹಳೆ ನ್ಯೂಸ್

ಮಂಗಳೂರು:  ಜಿಲ್ಲಾಡಳಿತ ಮತ್ತು ತಮ್ಮ ಇಲಾಖೆಯ ಜಂಟಿ ಸಹಯೋಗದೊಂದಿಗೆ ನವೆಂಬರ್ 10ರಂದು ರಾಜ್ಯಾದ್ಯಂತ ನಡೆಸಲು ಉದ್ದೇಶಿಸಿರುವ  ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ನನ್ನನ್ನು ಆಹ್ವಾನಿಸಬೇಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ವಿನಂತಿಸಿದ್ದಾರೆ.

ಟಿಪ್ಪು ಸುಲ್ತಾನನು ತನ್ನ ಅಧಿಕಾರಾವಧಿಯಲ್ಲಿ ಬಹುಸಂಖ್ಯಾತ ಹಿಂದುಗಳ ಮೇಲೆ ಮತ್ತು ಕ್ರೈಸ್ತ ಬಂಧುಗಳ ಮೇಲೆ ನಡಸಿದ ಅವಾಮನೀಯ ದೌರ್ಜನ್ಯವನ್ನು ಮರೆತು ರಾಜ್ಯ ಸರಕರ ಮತ್ತು ಜಿಲ್ಲಾಡಳಿತ ನಡೆಸುವ ಟಿಪ್ಪು ಜಯಂತಿಯನ್ನು ನಾನು ವೈಯಕ್ತಿಕ ನೆಲೆಯಲ್ಲಿ ವಿರೋಧಿಸುತ್ತೇನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೀಗಾಗಿ ಜಿಲ್ಲಾಧಿಕಾರಿಗಳು ಶಿಷ್ಟಾಚಾರ ಬದಿಗೊತ್ತಿ ನನ್ನ ಹೆಸರು ಮತ್ತು  ಬೆಳ್ತಂಗಡಿ ಶಾಸಕನಾದ ನನ್ನ ಹುದ್ದೆಯನ್ನು ಬಳಸದಂತೆ ಹಾಗೂ ಕಾರ್ಯಕ್ರಮಕ್ಕೂ ತನ್ನನ್ನು ಆಹ್ವಾನಿಸದಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಜಾಹೀರಾತು