Tuesday, April 8, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೊಂದು ಶಾಕ್..!!! 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ ಮನೀಷ್ ಅಲಿಯಾಸ್ ಬ್ರೋಕರ್ ಮನಿ ಜಾಮೀನು ಅರ್ಜಿ ವಜಾ – ಕಹಳೆ ನ್ಯೂಸ್

ಪುತ್ತೂರು : ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ ಮನೀಷ್ ಅಲಿಯಾಸ್ ಬ್ರೋಕರ್ ಮನಿ ಮಾನ್ಯ ಪುತ್ತೂರು‌ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ ಪ್ರತಿದಾದ ನಡೆದು ಇದೀಗ ಮಾನ್ಯ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿ ಅರ್ಜಿಯನ್ನು ತಿರಸ್ಕೃತಗೊಳಿಸಿದೆ.

ದೂರುದಾರರ ಪರ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಗೊಂಡ ಪ್ರತಿಷ್ಠಿತ ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ ಸಮರ್ಥವಾಗಿ ವಾದಮಂಡಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಮೀನು ನಿರಾಕರಣೆ ಪ್ರಮುಖ ಕಾರಣ..!!!

1. ಕಲ್ಲೇಗ ಟೈಗರ್ಸ್ ಟೀಂನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಭೀರಕ ಕೊಲೆ ಪುತ್ತೂರಿಗರನ್ನು ಬೆಚ್ಚಿಬೀಸಿತ್ತು. ಅಕ್ಷಯ್ ಕಲ್ಲೇಗರ ಮೈಮೇಲೆ ಇದ್ದ 50 ಕ್ಕೂ ಹೆಚ್ಚು ಗಾಯದ ಗುರುತುಗಳು ಇದೊಂದು ಭೀಕರ ಕೊಲೆ ಪ್ರಕರಣ ಎಂಬುದನ್ನು ಎತ್ತಿ ತೋರಿಸಿವಂತೆ ಇದೆ.

2. ಪೋಲೀಸರು ಕಲೆ ಹಾಕಿದ ಪ್ರಮುಖ‌ ಸಾಕ್ಷಿಗಳು ಮಹತ್ವದ ಪಾತ್ರ ವಹಿಸಲಿದೆ. 55 ಸಾಕ್ಷಿಗಳು ಈ ಪ್ರಕರಣದಲ್ಲಿ ಇದ್ದು, ಸಮರ್ಥವಾದ ಸಕ್ಷಾಧಾರಗಳು ಇದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ.

3. ಪ್ರಮುಖ ಸಾಕ್ಷ್ಯಾಧಾರಗಳ ತನಿಖೆ ನಡೆಯುವ ತನಕ ಆರೋಪಿಗಳನ್ನು ಹೊರ ಬಿಡುವುದು ಸರಿಯಲ್ಲ, ಸಾಕ್ಷಿದಾರನ್ನು ಬೆದರಿಸುವ ಹಾಗೂ ಭಯಪಡಿಸುವ ಎಲ್ಲಾ ಸಾಧ್ಯತೆಗಳು ಇದೆ ಎಂಬುದು ಅವರ ಕೊಲೆ ಮಾಡಿದ ರೀತಿ, ಮತ್ತು ಕ್ರೌರ್ಯದಿಂದ ಕಂಡುಬರುತ್ತದೆ.

ಇದು ನ್ಯಾಯಾಲಯದ ಗೆಲುವು – ಅಕ್ಷಯ್ ಸ್ನೇಹಿತರು :

ಇದೊಂದು ನ್ಯಾಯವಾದ ಗೆಲುವು ಎಂದು ಅಕ್ಷಯ್ ಸ್ನೇಹಿತರು ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ್ದು, ಸದ್ರಿ ಪ್ರಕರಣದಲ್ಲಿ ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ ಅವರು ಸಮರ್ಥವಾಗಿ ವಾದ ಮಂಡನೆ ಮಾಡಿದ್ದರ ಫಲ ಮತ್ತು ಆರೋಪಿಗಳ ಕ್ರೌರ್ಯ ಹಾಗೂ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಲಯವು ನ್ಯಾಯದ ಪರ ತೀರ್ಪು ನೀಡಿದೆ.
ಇಂದು ಪುತ್ತೂರಿನಲ್ಲಿ ಕೊಲೆಯಂತಹ ದುಷ್ಕೃತ್ಯಗಳನ್ನು ಮಾಡುವವರಿಗೆ ಉಳಿಗಾಲ ಇಲ್ಲ ಎಂಬುದನ್ನು ಮತ್ತು ಅವರಿಗೆ ಬೆಂಬಲಿಸುವವರಿಗೂ ಗೆಲುವು ಇಲ್ಲ ಎಂಬುದನ್ನು ಸಾಬೀತು ಪಡಿಸಿದೆ. ಅವರು ಎಷ್ಟೇ ದೊಡ್ಡ ದೊಡ್ಡ ನ್ಯಾಯವಾದಿಗಳನ್ನು ಹಿಡಿದರೂ, ಎಷ್ಟೇ ಹಣ ಚೆಲ್ಲಿಸಿದರು ನ್ಯಾಯವನ್ನು ಯಾರಿಂದಲೂ ಖರೀದಿಸಲು ಸಾಧ್ಯವಿಲ್ಲ ಮತ್ತು ಸಾಮಾನ್ಯ ಸಾರ್ವಜನಿಕರಿಗೂ ನ್ಯಾಯ ಲಭಿಸುವಂತೆ ಆಗಿದೆ ಎಂದು ಹೇಳಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ