Friday, September 20, 2024
ಸುದ್ದಿ

Breaking News : ಗಣಿಧಣಿಗೆ ಜೈಲೂಟವೇ ಗಟ್ಟಿ.! ನವೆಂಬರ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಲಯ ; ನಾಳೆ ಜಾಮೀನು ಸಿಗತ್ತಾ ? – ಕಹಳೆ ನ್ಯೂಸ್

ಬೆಂಗಳೂರು: ಅಂಬಿಡೆಂಟ್ ಕಂಪನಿ ಜೊತೆ 20 ಕೋಟಿ ರೂ. ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಯಲ್ಲಿದ್ದ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿಯನ್ನು ಇದೀಗ ಬಂಧಿಸಲಾಗಿದೆ.

ಸಂಜೆ 4 ಗಂಟೆಗೆ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಅದಕ್ಕೂ ಮೊದಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ನ್ಯಾಯಾಧೀಶರು ರೆಡ್ಡಿಯವರಿಗೆ ನವೆಂಬರ್ 24ರ ವೆಗೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಲ್ಲದೆ, ಜಾಮೀನು ಕೋರಿ ರೆಡ್ಡಿಪರ ವಕೀಲರು ಅರ್ಜಿ ಹಾಕಿದ್ದು, ನಾಳೆ ರೆಗ್ಯೂಲರ್ ಕೋರ್ಟಿನಲ್ಲಿ ವಿಚಾರಣೆ ನಡೆಯಲಿದ್ದು, ಮೂಲಗಳ ಪ್ರಕಾರ ರೆಡ್ಡಿಗೆ ಜಾಮೀನು ಲಭಿಸುವುದು ಬಹುತೇಕ ಡೌಟ್ ಎನ್ನಲಾಗಿದೆ.