Tuesday, February 11, 2025
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಜಿತ್‌ಗೆ ಸನ್ಮಾನ-ಕಹಳೆ ನ್ಯೂಸ್

ಪುತ್ತೂರು:ಜನವರಿ 26ರಂದು ನವದೆಹಲಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಪ್ರಧಾನಮಂತ್ರಿಗಳ ಪಥಸಂಚಲನದಲ್ಲಿ ಭಾಗವಹಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ
ಪ್ರಸ್ತುತ ವಿವೇಕಾನಂದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎನ್.‌ಸಿ.ಸಿ ಕೆಡೆಟ್‌ JUO ಸುಜಿತ್‌ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಇವರು 4/19 KAR BN NCC
MADIKERI̧ KARNATAKA ‍‍‌& GOA DIRECTORATE ನ್ನು ಪ್ರತಿನಿಧಿಸಿ ಪಥಸಂಚಲನಕ್ಕೆ ಆಯ್ಕೆಯಾಗಿದ್ದರು.

ಕಡಬ ತಾಲೂಕಿನ ರುಕ್ಮಯ್ಯ ಗೌಡ ಹಾಗೂ ಗೀತಾ ದಂಪತಿಗಳ ಪುತ್ರರಾಗಿರುವ ಇವರು ತಮ್ಮ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ
ಪೂರೈಸಿರುತ್ತಾರೆ. ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ, ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಸನ್ಮಾನಿಸಿ,
ಅಭಿನಂದಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು