ಬಡಕಬೈಲು ಜಂಕ್ಷನ್ ಬಳಿ ನಾಲ್ಕು ಮನೆಗಳಿಗೆ ಬೆಂಕಿ;ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ-ಕಹಳೆ ನ್ಯೂಸ್
![](https://www.kahalenews.com/wp-content/uploads/2025/02/WhatsApp-Image-2025-02-11-at-11.43.23-AM-750x450.jpeg)
ಬಂಟ್ವಾಳ: ತಾಲೂಕಿನ ಬಡಕಬೈಲು ಜಂಕ್ಷನ್ ಬಳಿ ಸುಮಾರು ನಾಲ್ಕು ಮನೆಗಳಿಗೆ ಬೆಂಕಿ ತಗಲಿದ ಘಟನೆ ತಡರಾತ್ರಿ ನಡೆದಿದ್ದು, ಘಟನೆಯಲ್ಲಿ ಯಾವುದೇ ಸಾವು- ನೋವು ಉಂಟಾಗಿಲ್ಲ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದೆ ಎನ್ನಲಾಗಿದ್ದು, ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಮನೆಮಂದಿಗೆ ಸಾಂತ್ವನ ಹೇಳಿದರು.