Tuesday, February 11, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವಶಕ್ತಿ ಕಡೇಶಿವಾಲಯ(ರಿ.) ಇದರ ವತಿಯಿಂದ ಪೆ.15 ರಂದು ‘ಸಂತೃಪ್ತಿ’ ಎಂಬ ವಿನೂತನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ: ಯುವಶಕ್ತಿ ಕಡೇಶಿವಾಲಯ(ರಿ) ಇದರ ವತಿಯಿಂದ ‘ಸಂತೃಪ್ತಿ’ ಎನ್ನುವ ವಿನೂತನ ಕಾರ್ಯಕ್ರಮ ಇದೇ ಬರುವ ಪೆ.15 ರಂದು ಸರಕಾರಿ ಹಿರಿಯ ಪ್ರಾಥಾಮಿಕ ಶಾಲೆ ಪೆರ್ಲಾಪು  ಕಡೇಶಿವಾಲಯದಲ್ಲಿ ನಡೆಯಲಿದೆ.

ನೂತನ ಶಾಲಾ ಕೊಠಡಿಗಳ ಉದ್ಘಾಟನೆ, ರಕ್ತದಾನ ಶಿಬಿರ, ಟೀಮ್ ವೈಎಸ್‍ಕೆ ವೆಬ್ ಸೈಟ್ ಚಾಲನೆ, ಸೇವಾಲಕ್ಷ್ಯ -ನೂರು ಲಕ್ಷ, ಸಭೆ ಸನ್ಮಾನ ಸಮಾರಂಭ, ಯುವರತ್ನ ಸನ್ಮಾನ ಹಾಗೂ ಸಾಂಸ್ಕೃತಿಕ  ಕಾರ್ಯಕ್ರಮಗಳು ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಗ್ಗೆ ಗಣಹೋಮ ನಡೆದು ಬಳಿಕ ರಕ್ತದಾನ ಶಿಬಿರ, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಸಮಾರಂಭ, ಸಾಯಿಶಕ್ತಿ ಬಳಗ ಮಂಗಳೂರು ಇವರಿಂದ ಅದ್ಧೂರಿ ರಂಗವಿನ್ಯಾಸದ ತುಳು ಜಾನಪದ ಸಿನಿನಾಟಕ ಜೋಡು ಜೀಟಿಗೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಸಭಾಧ್ಯಕ್ಷರಾದ ಯುಟಿ ಖಾದರ್, ಶಾಸಕ ರಾಜೇಶ್ ನಾಯ್ಕ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹಾಗೂ ಮತ್ತಿತರರು ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರವಿ ಕಟಪಾಡಿ, ಅನೀಶ್ ಪೂಜಾರಿ, ಲೋಕಯ್ಯ ಸೇರಾ ಹಾಗೂ ರೋಹಿತ್ ಮಾರ್ಲಾ ಅವರಿಗೆ ಯುವರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ.