Saturday, February 15, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿಯಿಂದ ಪೆರ್ನೆ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರಕ್ಕೆ ಅನುದಾನ ಮಂಜೂರು- ಕಹಳೆನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯ ಪೆರ್ನೆ ಗ್ರಾಮದ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರದ ನಿರ್ಮಾಣದ ಕಾಮಗಾರಿಗೆ ಯೋಜನೆಯ ಸಮುದಾಯಾಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ. 2,00,000/- ಮೊತ್ತ ಅನುದಾನದ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರಮೇಶ್ ರವರು ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರಾದ ನವೀನ್ ಕುಮಾರ್ ಪದಬರಿ, ಒಕ್ಕೂಟದ ವಲಯಾಧ್ಯಕ್ಷರಾದ ರಾಬರ್ಟ್ ಫೆರ್ನಾಂಡಿಸ್, ಪೆರ್ನೆ ಬಿಳಿಯೂರು ಒಕ್ಕೂಟದ ಅಧ್ಯಕ್ಷರಾದ ಗೋಪಾಲ ಸಪಲ್ಯ, ಪೆರ್ನೆ ಬಿ ಒಕ್ಕೂಟದ ಅಧ್ಯಕ್ಷರಾದ ಯಶೋದಾ ಮತ್ತು ಪದಾಧಿಕಾರಿಗಳು, ಭಜನಾ ಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷರಾದ ನರಸಿಂಹ ನಾಯಕ್, ಕಾರ್ಯದರ್ಶಿ ಗಿರೀಶ್ ಪೆರ್ಗಡೆ, ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಹಾಗೂ ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು