Monday, March 31, 2025
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನಿಮ್ಮ ಸಾಮರ್ಥ್ಯ ಅರಿತಾಗಲೇ ಯಶಸ್ಸು: ಡಾ. ರಾಜೇಶ್ವರಿ ಎಂ-ಕಹಳೆ ನ್ಯೂಸ್

ಪುತ್ತೂರು : ಮೊದಲು ನಿಮ್ಮ ಸಾಮರ್ಥ್ಯವನ್ನು ಅರಿತುಕೊಳ್ಳಿ ನಂತರ ಮುಂದಿನ ಹೆಜ್ಜೆಯಿಡಿ. ಯಾವ ವಿಷಯದಲ್ಲಿ ನಿಪುಣರೋ ಅದು ನಿಮ್ಮ ಆಯ್ಕೆಯಾಗಿರಲಿ. ಕಲಿಕೆ ಎನ್ನುವುದು ಬಾಯಿಪಾಠ ಮಾಡುವುದಲ್ಲ ವಿಷಯವನ್ನು ಅರ್ಥ ಮಾಡಿಕೊಳ್ಳುವುದು. ಆದ್ದರಿಂದ ವಿಷಯವನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ ಎಂದು ವಿವೇಕಾನಂದ ಕಾಲೇಜಿನ ಎಂಸಿಎ
ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಜೇಶ್ವರಿ ಎಂ ಹೇಳಿದರು.

ವಿವೇಕಾನಂದರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದ ಟ್ರೇನಿಂಗ್ ಆಂಡ್ ಪ್ಲೇಸ್‌ಮೆಂಟ್ ಸೆಲ್ ಮತ್ತು ಐಕ್ಯುಎಸಿ ಸಹಯೋಗದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಪಾತ್ ವೇ ಟು ಸಕ್ಸಸ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಎಂಸಿಎ ವಿಭಾಗದ ಪ್ರಾಧ್ಯಾಪಕಿ ಪ್ರೊ. ನೀಮ ಎಚ್, ಆಸಕ್ತಿ ಇದ್ದಾಗ ಮಾತ್ರವೇ ನಾವು ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ. ಗುರಿಯನ್ನು ತಲುಪಲು ಹಲವಾರು ದಾರಿಗಳಿವೆ ಯಾವ ದಾರಿ ಸರಿಯೆಂದು ನಿರ್ಧರಿಸುವ ಸಾಮರ್ಥ್ಯ ನಮ್ಮಲ್ಲಿರಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಸಿ, ರಸಾಯನಶಾಸ್ತç ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಡಾ.ಸ್ಮಿತಾ ರೈ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ