ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ಜಿಎಲ್ ಸಂಸ್ಥೆಯಿಂದ ಕಂಪ್ಯೂಟರ್ ಕೊಡುಗೆ; ಠಾಣೆಯಿಂದ ಕೃತಜ್ಞತಾ ಪತ್ರ ಸಲ್ಲಿಸಿ ಅಭಿನಂದನೆ – ಕಹಳೆ ನ್ಯೂಸ್

ಪುತ್ತೂರಿನ ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯ ವತಿಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು.
ಸಂಚಾರ ಪೊಲೀಸ್ ಠಾಣೆಯ ಎಎಸ್ಐ ಚಿದಾನಂದ ಮತ್ತು ಹೆಡ್ ಕಾನ್ಸ್ಟೇಬಲ್ ದಿನೇಶ್ ಅವರು ಜಿಎಲ್ ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಿದರು. ಈ ವೇಳೆ ಉದಯ ರವಿ ಭಾಗಿಯಾಗಿದ್ದರು.