ಕಂಬಳದಲ್ಲಿ ಗೆದ್ದ ಚಿನ್ನದ ಬಹುಮಾನದಲ್ಲಿ ಅರ್ಧಭಾಗ ದೇವರಿಗೆ ಸಮರ್ಪಣೆ-ಕಹಳೆ ನ್ಯೂಸ್

ಪುತ್ತೂರು: ಇಲ್ಲಿ ನಡೆದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 2 ಪವನ್ ಗೆದ್ದ ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ ಅವರು, 1 ಪವನ್ ಚಿನ್ನವನ್ನು ಸೋಮವಾರ ಪುತ್ತೂರಿನ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಿದರು.
ಅವರು ಚಿನ್ನ ಹಾಗೂ ದೇವಳದಲ್ಲಿ ನಡೆಯುವ ಅನ್ನದಾನ ಸೇವೆಗಾಗಿ ₹ 5ಸಾವಿರ ದೇಣಿಗೆ ನೀಡಿದರು.
ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಈಶ್ವರ ಬೇಡೆಕರ್, ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ ಭಾಗವಹಿಸಿದ್ದರು