Tuesday, March 25, 2025
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸಂತಾಪಸುದ್ದಿ

ಬೆಂಗಳೂರು: ಯುವತಿ ಜತೆ ಲಿವ್ ಇನ್​ನಲ್ಲಿದ್ದ ಉತ್ತರ ಪ್ರದೇಶದ ಯುವಕ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಬೆಂಗಳೂರು ಮಾರ್ಚ್ 6: ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್‌ಎನ್‌ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿರುವುದು ತಿಳಿದುಬಂದಿದೆ.

ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾರ್ಚ್ 4ರ ನಸುಕಿನಲ್ಲಿ ಮಯಾಂಕ್ ರಜನಿ ಅಪಾರ್ಟ್ಮೆಂಟ್​ನ 12ನೇ ಮಾಡಿಂದ ಕೆಳಗೆ ಹಾರಿದ್ದಾನೆ. ಅದಾದ ಸ್ವಲ್ಪ ಹೊತ್ತಿನ ಬಳಿಕ ಸೆಕ್ಯೂರಿಟಿ ಗಾರ್ಡ್​ಗೆ ಯುವಕನ ಮೃತದೇಹ ಕಾಣಿಸಿದೆ. ಗಾಬರಿಗೊಂಡ ಆತ 12ನೇ ಮಹಡಿಯಲ್ಲಿರುವ ಯುವಕನ ಕೊಠಡಿಗೆ ತೆರಳಿ ಬಾಗಿಲು ಬಡಿದಿದ್ದಾನೆ. ಆಗ ತಾನೆ ಎದ್ದು ಬಂದ ಯುವತಿ, ಸೆಕ್ಯೂರಿಟಿ ಗಾರ್ಡ್ ಹೇಳಿದ ವಿಚಾರ ತಿಳಿದು ಗಾಬರಿಗೊಂಡಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಪ್ರದೇಶದ ಮಯಾಂಕ್ 4 ವರ್ಷಗಳಿಂದ ಬೆಂಗಳೂರಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಫ್ಲಾಟ್ ಬಾಡಿಗೆಗೆ ಪಡೆದು ವಾಸ ಮಾಡುತ್ತಿದ್ದ. ಕಳೆದ ಎರಡು ವರ್ಷಗಳಿಂದ ಯುವತಿ ಜೊತೆ ಲಿವ್ ಇನ್ ರಿಲೇಷನ್​ಶಿಪ್​​ನಲ್ಲಿದ್ದ.

ಮೃತ ಯುವಕ ಕೆಲವು ಸಮಯದಿಂದ ಬೆಂಗಳೂರಿನಲ್ಲಿ ಸ್ಟಾರ್ಟ್​ ಅಪ್ ಒಂದನ್ನು ಶುರು ಮಾಡಿದ್ದ. ಅದರಲ್ಲಿ ನಷ್ಟವಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಸ್ಟಾರ್ಟ್​ಅಪ್​ನಲ್ಲಿ ಆದ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಬೇರೆ ಕಾರಣಗಳಿವೆಯೇ ಎಂಬ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ