ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಗಾಂಗ ದಾನದ ಬಗ್ಗೆ ಮತ್ತು ಕೇಂದ್ರ ಸರ್ಕಾರದ ಮಹಿಳೆಯರಿಗೆ ಇರುವ ಯೋಜನೆಯ ಬಗ್ಗೆ ಮಾಹಿತಿ-ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಗಾಂಗ ದಾನದ ಬಗ್ಗೆ ಮತ್ತು ಕೇಂದ್ರ ಸರ್ಕಾರದ ಮಹಿಳೆಯರಿಗೆ ಇರುವ ಯೋಜನೆಯ ಬಗ್ಗೆ ಮಾಹಿತಿಯನ್ನು ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಅವರು ಮಾತನಾಡಿ ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನ ನೋಂದಣಿಯನ್ನು ಮಾಡುವ ಮೂಲಕ ಹಲವರ ಜೀವವನ್ನು ಉಳಿಸುವಲ್ಲಿ ಮಾದರಿಯಾಗಬೇಕಾಗಿ ತಿಳಿಸಿದರೆ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಮಂಜುಳಾ ರಾವ್ ರವರು ಕೇಂದ್ರ ಸರಕಾರದಿಂದಮಹಿಳೆಯರಿಗೆ ಸಿಗುವಂತಹ ಯೋಜನೆಯ ಬಗ್ಗೆ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಮತ್ತು ಯತೀಶ್ ಆರ್ವರ್, ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂರ್ಣಿಮಾ ರಾವ್, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಮಾಜಿ ಉಪ ಮಹಾಪೌರರಾದ ಭಾನುಮತಿ, ಮಂಡಲದ ಪ್ರಧಾನ ಕಾರ್ಯದರ್ಶಿಯಾದ ರಮೇಶ್ ಹೆಗ್ಡೆ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಬರಿ ಶೆಟ್ಟಿ, ಮತ್ತು ಕಮಲಾಕ್ಷಿ ಸೇರಿದಂತೆ ಮಹಿಳಾ ಮೋರ್ಚಾದ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಜಿಲ್ಲಾ ಪದಾಧಿಕಾರಿಗಳು, ಮಂಡಲದ ಮಹಿಳೆಯರು ಉಪಸ್ಥಿತರಿದ್ದರು.