Friday, September 20, 2024
ಸುದ್ದಿ

ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ ಭಾರತಕ್ಕೆ – ಕಹಳೆ ನ್ಯೂಸ್

ನವದೆಹಲಿ: 2019ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ ಭಾರತಕ್ಕೆ ಆಗಮಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರಿ ಮೂಲಗಳಿಂದ ತಿಳಿದುಬಂದಿದೆ.

ಸಿರಿಲ್​ ರಮಫೊಸಾ ಕಳೆದ ಫೆಬ್ರವರಿಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಸಿರಿಲ್​ ರಮಫೊಸಾ ಗಾಂಧಿವಾದಿಗಳಾಗಿದ್ದು, ಇದೇ ಕಾರಣಕ್ಕೆ ಭಾರತ ಸರ್ಕಾರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಲಾಗಿತ್ತು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆಗಮಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಭಾರತ ಸರ್ಕಾರ ನೀಡಿದ ಆಮಂತ್ರಣವನ್ನು ಅವರು ನಿರಾಕರಿಸಿದ್ದರು. ಅಂದು ಟ್ರಂಪ್​ ಅವರು ಬೇರೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೇ ಬೇಕಾಗಿದ್ದರಿಂದ ಭಾರತಕ್ಕೆ ಭೇಟಿಕೊಡಲು ಆಗುವುದಿಲ್ಲ ಎಂದು ವೈಟ್​ಹೌಸ್​ ಮಾಧ್ಯಮಗಳಿಗೆ ಮಾಹಿತಿ ನೀಡಿತ್ತು.

ಜಾಹೀರಾತು

ರಾಮಫೋಸಾ ಅವರು ಅಧ್ಯಕ್ಷರಾಗುವ ಮೊದಲು, ವರ್ಣಭೇದ ನೀತಿ ವಿರೋಧಿ ಸಂಘಟನೆಯ ಕಾರ್ಯಕರ್ತರಾಗಿದ್ದರು. ಅವರೊಬ್ಬ ಉದ್ಯಮಿಯಾಗಿ ಹಾಗೂ ಕಾರ್ಮಿಕ ಒಕ್ಕೂಟದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು. 2014 ರಿಂದ 2018 ರವರೆಗೆ ದಕ್ಷಿಣಾಫ್ರಿಕಾದ ಉಪಾಧ್ಯಕ್ಷರಾಗಿದ್ದರು.