Friday, September 20, 2024
ಸುದ್ದಿ

Breaking News : ಷಾ ಭೇಟಿ ಇಂಪ್ಯಾಕ್ಟ್ ; ಬಿ.ಎಸ್. ವೈಗೆ ರಸ್ಟ್, ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನೇಮಕಕ್ಕೆ ಚಿಂತನೆ, ಯಾರಿಗೆ ಒಲಿಯಲಿದೆ ರಾಜ್ಯಾಧ್ಯಕ್ಷ ಪಟ್ಟ ? – ಕಹಳೆ ನ್ಯೂಸ್

ವಿಧಾನಸಭಾ ಉಪ ಚುನಾವಣೆಯಲ್ಲಿ ಸೋಲು ಹಾಗೂ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ಎಸ್​. ಯಡಿಯೂರಪ್ಪ ಅವರನ್ನು ಬದಲಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವುದು ಯಡಿಯೂರಪ್ಪ ಅವರ ಸಂಕಷ್ಟ ಹೆಚ್ಚಿಸಿದೆ.

ರಾಜ್ಯಕ್ಕೆ ಭೇಟಿ ನೀಡಿರುವ ಅಮಿತ್ ಶಾ, ಬೆಂಗಳೂರಿಗೆ ಭೇಟಿ ನೀಡಿದ ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿ ಆರ್​ಎಸ್​ಎಸ್​ ಮುಖಂಡರ ಜೊತೆ ಮಾತುಕತೆ ನಡೆಸಿದ ನಂತರ ಮಂಗಳೂರಿನ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ರಾಜ್ಯಾಧ್ಯಕ್ಷರ ಸ್ಥಾನದಲ್ಲಿ ಬದಲಾವಣೆ ತರಲು ಚಿಂತನೆ ನಡೆದಿದ್ದು, ಇದಕ್ಕಾಗಿ ಯುವ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ಇದೆ. ಆದರೆ ಈ ಬದಲಾವಣೆಯಿಂದ ಲಿಂಗಾಯತ ಮತ ಬ್ಯಾಂಕ್​ ಹೊಡೆತ ಬೀಳುವುದೇ ಎಂಬ ಬಗ್ಗೆಯೂ ಚಿಂತನೆ ನಡೆದಿದೆ.

ಜಾಹೀರಾತು

ಒಂದು ವೇಳೆ ಯಡಿಯೂರಪ್ಪ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಅವರ ಬದಲು, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಮಾಜಿ ಸಚಿವ ಸಿ.ಟಿ ರವಿ, ಅನಂತ್ ಕುಮಾರ್ ಹೆಗ್ಡೆ, ಮಾಜಿ ಡಿ.ಸಿ.ಎಂ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಶ್ರೀರಾಮುಲು ಸೇರಿದಂತೆ ಹಲವರ ಹೆಸರುಗಳು ಕೇಳಿ ಬರುತ್ತಿವೆ.