Friday, September 20, 2024
ಸುದ್ದಿ

ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ನ. 19ರಂದು ಪ್ರತಿಭಟನಾ ಸಭೆ: ರವಿಕಿರಣ್ ಪುಣಚ – ಕಹಳೆ ನ್ಯೂಸ್

ಮಂಗಳೂರು: ಈ ಬಾರಿ ಸುಳಿದ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಅಧಿಕ ಪ್ರಮಾಣದ ಕೊಳೆರೋಗ ಕಾಣಿಸಿಕೊಂಡಿದೆ. ಇದರಿಂದ ರೈತರಿಗೆ ನಷ್ಟವಾಗಿದ್ದು ಸಾಲ ಮನ್ನಾದ ಕೂಗು ಮಾತ್ರವಲ್ಲದೆ ರಾಜ್ಯ ರೈತರ ಸಂಪೂರ್ಣ ಸಾಲ ಮನ್ನಾದ ಬೇಡಿಕೆ ಜಾಸ್ತಿಯಾಗ್ತಾ ಇದೆ. ಇದರಿಂದಾಗಿ ಸಂತ್ರಸ್ತ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ನ. 19ರಂದು ಬೆಂಗಳೂರಿನ ವಿಧಾನಸೌಧ ಮುತ್ತಿಗೆ ಹಾಗೂ ಪ್ರತಿಭಟನಾ ಸಭೆ ನಡೆಯಲಿದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದ್ದಾರೆ.

ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಮೆರವಣಿಗೆ ಮೂಲಕ ವಿಧಾನ ಸೌಧಕ್ಕೆ ತೆರಳಲಿದ್ದು, ಬಂಟ್ವಾಳ ತಾಲೂಕಿನಿಂದ 100ಕ್ಕೂ ಹೆಚ್ಚು ರೈತರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಹರ್ಷಿತ್ ಮಾದಾಯಿ, ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು