Thursday, March 20, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಟ್ಟೆ ಅಂಗಡಿಗೆ ನುಗ್ಗಿ ಬಟ್ಟೆ ಹಾಗೂ ಇತರೆ ವಸ್ತುಗಳನ್ನು ದೋಚಿ ಪರಾರಿಯಾದ ತಂಡ-ಕಹಳೆ ನ್ಯೂಸ್

ವಿಟ್ಲ:ಏಕಾಏಕಿ ಅಂಗಡಿಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿದ ನವೀನ್ ಕುಂಪಲ ಮತ್ತು ಇತರ ಮೂರು ಮಂದಿಯ ತಂಡ,  ಅಂಗಡಿಯಲ್ಲಿದ್ದ ಬಟ್ಟೆ ಮತ್ತು ಇತರ ವಸ್ತುಗಳನ್ನು ದೋಚಿ ಪರಾರಿಯಯಾದ ಘಟನೆ ವಿಟ್ಲ ಶಾಲಾ ರಸ್ತೆ ಬಳಿ ನಡೆದಿದೆ.

ಮಾರ್ಚ್ 18 ರಂದು ಮಧ್ಯಾಹ್ನ ವೇಳೆ ಈ ಘಟನೆ ನಡೆದಿದೆ.ನಾಲ್ಕು ಮಂದಿಯ ತಂಡವು ಏಕಾಏಕಿ ಬಟ್ಟೆ ಅಂಗಡಿಗೆ ಪ್ರವೇಶಿಸಿದ್ದು, ವಸ್ತುಗಳನ್ನು ಹಾಗೂ ಬಟ್ಟೆಯನ್ನು ತಮ್ಮ ಬ್ಯಾಗಿನೊಳಗೆ ತುಂಬಿಸಿ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದರು. ಆಗ ಅಲ್ಲಿದ್ದ ಮಹಿಳಾ ಸಿಬ್ಬಂದಿಯು ಯಾಕೆ ಬಟ್ಟೆಗಳನ್ನು ತುಂಬಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಆರೋಪಿಗಳು “ನಿನಗೆ ಎಷ್ಟು ಕೆಲಸವಿದೆಯೋ ಅಷ್ಟೇ ಮಾಡು, ನಮ್ಮ ಸುದ್ದಿಗೆ ಬಂದ್ರೆ ಜಾಗ್ರತೆ” ಎಂದು ಬೆದರಿಸಿ ಬಲಾತ್ಕಾರದಿಂದ ಬಟ್ಟೆ ಮತ್ತು ವಸ್ತುಗಳನ್ನು ಕೊಂಡೊಯ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ