Friday, March 28, 2025
ಜಿಲ್ಲೆಸುದ್ದಿ

ಗ್ಯಾಸ್ ಸಿಲಿಂಡರ್ ಸಾಗಾಟ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ; ಚಾಲಕನಿಗೆ ಗಾಯ

ದಾಂಡೇಲಿ : ಗ್ಯಾಸ್ ಸಿಲಿಂಡರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿ, ಚಾಲಕನಿಗೆ ಗಾಯವಾದ ಘಟನೆ ಇಂದು ಮಂಗಳವಾರ(ಮಾ.25) ಬೆಳಿಗ್ಗೆ 9:30 ಗಂಟೆ ಸುಮಾರಿಗೆ ಹಳಿಯಾಳ – ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಆಲೂರು – ಕರ್ಕಾ ಮಧ್ಯೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ವಿನಾಯಕ ಚ್ಯಾಟಿ ಎಂಬಾತನೇ ಗಾಯಗೊಂಡ ಚಾಲಕನಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದ ವೇಳೆ ಚಾಲಕ ವಾಹನದೊಳಗಡೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳೀಯರು ವಾಹನದ ಬಾಗಿಲು ಮುರಿದು ಚಾಲಕನನ್ನು ವಾಹನದಿಂದ ಕೆಳಗಿಳಿಸಿ ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ 108 ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗಿದ್ದು. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ