Saturday, March 29, 2025
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ-ಕಹಳೆ ನ್ಯೂಸ್

ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಶ್ರೀಯುತ ನಾರಾಯಣಗೌಡ ಮುಚ್ಚುರು ಉದ್ಘಾಟಿಸಿ,ಮಕ್ಕಳಿಗೆ ಶುಭವನ್ನು ಹಾರೈಸಿದರು. ಅಧ್ಯಕ್ಷತೆಯನ್ನು ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ಸೀತಾರಾಮ ಮಡಿವಾಳ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಘವ ಗೇರುಕಟ್ಟೆ, ಯಕ್ಷಗಾನ ಅಕಾಡೆಮಿ ಸದಸ್ಯರು ಹಾಗೂ ಭರತನಾಟ್ಯ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಡಿಂಪಲ್ ಇವರು ಉಪಸ್ಥಿತರಿದ್ದರು. ಹಾಗೆಯೇ ಕಿರಣ್ ಪುಷ್ಪಗಿರಿ ಇವರು ಕಾರ್ಯಕ್ರಮಕ್ಕೆ ಆಗಮಿಸಿ ಮಕ್ಕಳಿಗೆ ಶುಭ ಹಾರೈಸಿ ಸಿಹಿ ತಿಂಡಿಗಳನ್ನು ಹಂಚಿದರು. ಶ್ರೀಮತಿ ಸಂಧ್ಯಾ ಆನಂದ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.ಯಕ್ಷ ಗುರು ಇವರು ವಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ