ಡಾ| ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡದಂತೆ ಸಿವಿಲ್ ನ್ಯಾಯಾಲಯವು ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಯಾವುದೇ ಸುಳ್ಳು ಸುದ್ದಿ, ಆಧಾರರಹಿತ, ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿ ಪ್ರಕಟಿಸಲು ಅಥವಾ ಹರಡದಂತೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಆದೇಶಿಸಿದೆ.
ನ್ಯಾಯಾಲಯವು ವಿಚಾರಣೆ ನಡೆಸಿ, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಯಾವುದೇ ಸುಳ್ಳು, ಆಧಾರರಹಿತ, ಅಜಾಗರೂಕ ಆಪಾದನೆಯನ್ನು ಪ್ರಸಾರ, ಪ್ರಕಟಿಸುವುದು ಅಥವಾ ಪ್ರಸಾರಿಸುವುದು/ಫಾರ್ವರ್ಡ್ ಮಾಡು ವುದು/ಅಪ್ಲೋಡ್ ಮಾಡುವುದು / ಹಂಚುವುದನ್ನು ಮಾಡದಂತೆ ಆದೇಶಿಸಿದೆ. ಆದೇಶ ಉಲ್ಲಂಘನೆ ಮಾಡಿದರೆ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ಉಲ್ಲೇಖಿಸಿದೆ.
ಈ ಆದೇಶದ ಪ್ರಕಾರ, ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ಸಂಸ್ಥೆಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಅವಹೇಳನಕಾರಿ ವಿಚಾರ ಹಂಚಿಕೊಂಡಿದ್ದಲ್ಲಿ ತತ್ಕ್ಷಣ ಅಳಿಸಿಹಾಕಬೇಕು ಮತ್ತು ಮುಂದುವರಿಸಿದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗುವ ಸಾಧ್ಯತೆ ಇರುತ್ತದೆ.