ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ; ಸಂಸದ ಕ್ಯಾ.ಬ್ರಿಜೇಶ್ ಚೌಟ ಫಾಲೋ ಅಪ್ ಫಲಶ್ರುತಿ – ಕಹಳೆ ನ್ಯೂಸ್

ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾನ್ಯ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಇದೇ ಶನಿವಾರ ಏಪ್ರಿಲ್ 12ನೇ ತಾರೀಖಿನಂದು ನೆರವೇರಿಸಲಿದ್ದಾರೆ..
ಇದು ಸಾಕಾರಗೊಳ್ಳಲು ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೆ ಸಚಿವಾಲಯದೊಂದಿಗೆ ಆದ್ಯತೆಯ ಮೇರೆಗೆ ಫಾಲೋ ಅಪ್ ಮಾಡಿದ ಕಾರಣ, ಈ ಬಹುಕಾಲದಿಂದ ಬಾಕಿ ಉಳಿದಿರುವ ಬೇಡಿಕೆ ಈಡೇರುತ್ತಿದೆ ಎಂದು ಹೇಳಲಾಗುತ್ತಿದೆ.
ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಜೆ 4 ಗಂಟೆಗೆ ನಡೆಯುವ ಈ ಉದ್ಘಾಟನಾ ಸಮಾರಂಭ ನಡೆಯಲಿದೆ.