Friday, September 20, 2024
ಸುದ್ದಿ

ಜನಜಾಗೃತಿ ಸಭೆಗೆ ಹಿಂದೂ ಜಾಗರಣ ವೇದಿಕೆ ಸಂಪೂರ್ಣ ಬೆಂಬಲ – ಕಹಳೆ ನ್ಯೂಸ್

ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮತ್ತು ಶಬರಿಮಲೆಯ ಪಾವಿತ್ರ‍್ಯತೆಯ ರಕ್ಷಣೆ ಆಗಲೇಬೇಕೆಂದು ಹಿಂದೂ ಜಾಗರಣ ವೇದಿಕೆ ದಕ್ಷಿಣ ಜಿಲ್ಲೆ ಆಗ್ರಹಿಸಿದೆ.

ಮಂಗಳೂರು ಪತ್ರಿಕಾ ಭವನದಲ್ಲಿ ಮಾತನಾಡಿದ ರಾಧಾಕೃಷ್ಣ ಅಡ್ಯಂತಾಯ ನವೆಂಬರ್ 25 ಆದಿತ್ಯವಾರದಂದು ಮಂಗಳೂರು ಕೇಂದ್ರ ಮೈದಾನದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುವ ಜನಜಾಗೃತಿ ಸಭೆಗೆ ಹಿಂದೂ ಜಾಗರಣ ವೇದಿಕೆ ಸಂಪೂರ್ಣ ಬೆಂಬಲವಿದ್ದು ಎಲ್ಲ ರೀತಿಯಲ್ಲಿ ಸಹಕಾರ ನೀಡಲಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ ಶಬರಿಮಲೆಯಲ್ಲಿ ಪಾವಿತ್ರ‍್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂ ಜಾಗರಣ ವೇದಿಕೆ ಹೋರಾಟ ಮಾಡಲಿದೆ ಎಂದರು. ಈ ಸಂದರ್ಭದಲ್ಲಿ ಅಮಿತ್, ಸುಭಾಷ್ ಪಡೀಲ್, ಕಿಶೋರ್ ಉಪಸ್ಥಿತರಿದ್ದರು.

ಜಾಹೀರಾತು