Friday, September 20, 2024
ಸುದ್ದಿ

ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಜೇಂದ್ರ ಕುಮಾರ್ ರನ್ನು ಗೌರವಿಸುವುದು ಪ್ರಸ್ತುತವಾಗಿದೆ: ರಾಜಾರಾಂ ಭಟ್ – ಕಹಳೆ ನ್ಯೂಸ್

ಬಂಟ್ವಾಳ: ಸಹಕಾರ ರತ್ನ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ರಾಗಿ ಎಂ.ಎನ್.ರಾಜೇಂದ್ರ ಕುಮಾರ್ 25 ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಸಹಕಾರ ರತ್ನ ಡಾ! ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನಾ ಸಮಿತಿ ಹಾಗೂ ಎಲ್ಲಾ ಸಹಕಾರಿಗಳ ವತಿಯಿಂದ ಸಾರ್ವಜನಿಕ ಅಭಿನಂದನೆ ಸಮಾರಂಭ ಜ.19 ರಂದು ಬೆಳಿಗ್ಗೆ ಮಂಗಳೂರು ನೆಹರು ಮೈದಾನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಪೂರ್ವ ತಯಾರಿಯ ಸಭೆ ಬಿಸಿರೋಡ್ ತಾ.ಪಂ.ನ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ಜಿಲ್ಲಾ ಕೇಂದ್ರ  ಸಹಕಾರಿ ಬ್ಯಾಂಕ್ ನಿರ್ದೇಶಕರಾದ ರಾಜಾರಾಂ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಬಳಿಕ ಮಾತನಾಡಿದ ಅವರು ಸಹಕಾರಿ ಕ್ಷೇತ್ರದಲ್ಲಿ ವಿಶಿಷ್ಟ ರೀತಿಯ ಸಾಧನೆ ಮಾಡಿದ, ನವೋದಯ ಸ್ವಸಹಾಯ ಗುಂಪುಗಳ ರಚನೆ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಕಾರಣೀಕರ್ತರಾದ ಎಂ.ಎನ್.ರಾಜೇಂದ್ರ ಕುಮಾರ್
ಅವರನ್ನು ಗೌರವಿಸುವುದು ಪ್ರಸ್ತುತವಾಗಿದೆ.
ಸಹಕಾರಿ ಕ್ಷೇತ್ರವನ್ನು ಬಿಂಬಿಸುವ ಟ್ಯಾಬ್ಲೋ ಶೋಭಾಯಾತ್ರೆ ಜೊತೆಗೆ ಈ ಕಾರ್ಯಕ್ರಮದಲ್ಲಿ ಸಹಕಾರಿ ವ್ಯವಸ್ಥೆ ಗೆ ಪೂರಕವಾದ ಗೋಷ್ಠಿಯನ್ನು ಹಮ್ಮಿಕೊಂಡಿದೆ. ಒಂದು ರೀತಿಯಲ್ಲಿ ವಿಶಿಷ್ಟ ರೀತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.‌
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಗಮಿಸುತ್ತಾರೆ, ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಧಿಕಾರಿ ಡಾ! ವಿರೇಂದ್ರ ಹೆಗ್ಗಡೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ‌
ಸಹಕಾರ ಕ್ಷೇತ್ರದ ಇತಿಹಾಸ, ವರ್ತಮಾನ ಹಾಗೂ ಭವಿಷ್ಯದ ಅಶಯಗಳನ್ನು ಬಿಂಬಿಸುವ  ಮ್ಯೂಸಿಯಂ ಸ್ಥಾಪನೆ, ಸ್ಮರಣ ಸಂಚಿಕೆ ಬಿಡುಗಡೆ ಕೂಡಾ ಬಿಡುಗಡೆಯಾಗಲಿದೆ. ಇದಕ್ಕೆ ಎಲ್ಲಾ ಸಹಕಾರಿಗಳ ಸಹಕಾರ ಬೇಕಾಗಿದೆ ಎಂದರು.
ಜಿಲ್ಲಾ ಕೇಂದ್ರ ಸಹಕಾರಿ ಬ್ಬ್ಯಾಂಕ್ ನಿರ್ದೇಶಕರಾದ ಡಾ! ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ ಬಲ್ಯೋಟ್ಟು, ಹಿರಿಯ ಸಹಕಾರಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್  ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು